ಬೆಂಗಳೂರು: ‘ಇ–ಹರಾಜು ಕಾರ್ಯವಿಧಾನದ ಕಾರಣ ಕರ್ನಾಟಕದಲ್ಲಿ ಕಬ್ಬಿಣದ ಅದಿರಿನ ವ್ಯಾಪಾರದ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ಸುಮಾರು ₹8 ಸಾವಿರ ಕೋಟಿ ಆದಾಯ ನಷ್ಟವಾಗುತ್ತಿದೆ. ಈ ನಿಬಂಧನೆಗಳನ್ನು ತೆಗೆದುಹಾಕಬೇಕು. ಈ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಧ್ಯ ಪ್ರವೇಶಿಸಬೇಕು’ ಎಂದು ಭಾರತೀಯ ಗಣಿ ಉದ್ಯಮಗಳ ಒಕ್ಕೂಟದ (ಫಿಮಿ) ದಕ್ಷಿಣ ವಲಯ ಕೇಂದ್ರ ಒತ್ತಾಯಿಸಿದೆ.