2018ರಲ್ಲಿ ಆರ್.ಪ್ರದೀಪ್ಕುಮಾರ್ ಎಂಬಾತ ಬೆಂಗಳೂರು ಟ್ರಾನ್ಸ್ಪೋರ್ಟ್ ಸಲ್ಯೂಷನ್ ಎಂಬ ಕಂಪನಿ ಸ್ಥಾಪಿಸಿದ್ದು, ಕಂಪನಿಗೆ ವಾಹನ ಖರೀದಿಸಲು ಸಾಲ ನೀಡುವಂತೆ ಕೋರಿಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಮನೆ, ಕಚೇರಿ ದಾಖಲೆ ಸಲ್ಲಿಸಿದ್ದರು. ದಾಖಲೆ ಪರಿಶೀಲಿಸಿ 6 ವಾಹನಗಳಿಗೆ ಮಹೀಂದ್ರ ಫೈನಾನ್ಸ್ ಕಂಪನಿಯವರು ಸಾಲ ಮಂಜೂರು ಮಾಡಿದ್ದರು. ಬಳಿಕ, ಪ್ರದೀಪ್ಕುಮಾರ್ ಸಾಲದ ಕಂತು ಪಾವತಿಸಿರಲಿಲ್ಲ. ಮನೆ ಹಾಗೂ ಕಚೇರಿಯನ್ನು ಪರಿಶೀಲಿಸಿದಾಗ ಅವರು ನಾಪತ್ತೆಯಾಗಿದ್ದರು. ಬಳಿಕ ಮೈಕೋ ಲೇಔಟ್ ಠಾಣೆಗೆ ದೂರು ನೀಡಲಾಗಿತ್ತು. ಈ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.