<p><strong>ಬೆಂಗಳೂರು:</strong>ಮಕ್ಕಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಸಮುದಾಯದ ಸಹಭಾಗಿತ್ವಕ್ಕೆ ಸುಮಾರು 72 ಕಂಪನಿಗಳು ಆಸಕ್ತಿ ತೋರಿಸಿದ್ದು, ಕಂಪ್ಯೂಟರ್, ಟ್ಯಾಬ್ ಸಹಿತ ಹಲವು ರೀತಿಯಲ್ಲಿ ಕೊಡುಗೆ ನೀಡುವ ವಾಗ್ದಾನ ಮಾಡಿವೆ.</p>.<p>ವಿಕಾಸಸೌಧದಲ್ಲಿ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ‘ಸಾರ್ವಜನಿಕ ಶಿಕ್ಷಣ ಬಲಪಡಿಸುವಲ್ಲಿ ಖಾಸಗಿ ಸಹಭಾಗಿತ್ವ’ ಕುರಿತ ಸಂವಾದದಲ್ಲಿ ಈ ಕಂಪನಿಗಳು ಸುಮಾರು ₹150 ಕೋಟಿ ವೆಚ್ಚದ ಕಾಮಗಾರಿಗಳು, ಕೊಡುಗೆಗಳನ್ನು ನೀಡುವತಮ್ಮ ಬದ್ಧತೆ ಪ್ರದರ್ಶಿಸಿದವು.</p>.<p>ಇದುವರೆಗೆ ಶಾಲಾ ಕಟ್ಟಡ, ಕೊಠಡಿಗಳನ್ನು ನಿರ್ಮಿಸಲು ಮುಂದಾಗುತ್ತಿದ್ದ ಭಾರತೀಯ ಯುವ ತೇರಾಪಂತ್ ಸಮಿತಿಯ ವಿಮಲ್ ಕಠಾರಿಯಾ, ಶಾಲೆಗಳಿಗೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನೀಡುವ<br />ಉಪಕ್ರಮಕ್ಕೆ ಮುಂದಾಗಿರುವುದಾಗಿ ಪ್ರಕಟಿಸಿದರು ಹಾಗೂ ಸಾಂಕೇತಿಕವಾಗಿ ಕಂಪ್ಯೂಟರ್, ಲ್ಯಾಪ್ಟಾಪ್ಗಳನ್ನು ಹಸ್ತಾಂತರಿಸಿದರು.</p>.<p>‘100 ಶಾಲಾ ಕೊಠಡಿಗಳ ನಿರ್ಮಾಣ ಪ್ರಗತಿಯಲ್ಲಿವೆ, ಇನ್ನು ನಾವು ಶಾಲೆಗಳಲ್ಲಿ ಹಸಿರೀಕರಣ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಆದ್ಯತೆ ನೀಡಲಿದ್ದೇವೆ’ ಎಂದರು.</p>.<p>ಸ್ಯಾಮ್ಸಂಗ್ ಕಂಪನಿಯಿಂದ ತುಮಕೂರು ಮತ್ತು ರಾಮನಗರ ಜಿಲ್ಲೆಯ 50 ಶಾಲೆಗಳಿಗೆ 1,000 ಇ-ಕಂಟೆಂಟ್ ಸಮೇತ ಟ್ಯಾಬ್ಗಳನ್ನು ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ<br />50 ಶಾಲೆಗಳಿಗೆ 1,000 ಟ್ಯಾಬ್ಗಳನ್ನು ಒದಗಿಸುವುದಾಗಿತಿಳಿಸಲಾಯಿತು.</p>.<p>ದೆಹಲಿಯ ಥಿಂಕ್ ಥ್ರೂ ಕನ್ಸಲ್ಟೆಂಟ್ಸ್,ಬಿಐಎಲ್, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ , ಎಂಬೆಸಿ ಗ್ರೂಪ್, ಬಯೋಕಾನ್, ಎಚ್ಪಿಇಂಡಿಯಾ, ಟೊಯೊಟಾ, ಅಜೀಂ ಪ್ರೇಮ್ಜಿ ಪ್ರತಿಷ್ಠಾನ ಮೊದಲಾದ ಕಂಪನಿಗಳು, ಸೇವಾ ಸಂಸ್ಥೆಗಳಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<p><em><strong>ಪ್ರಧಾನಿ ಜತೆಗಿನ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ರಾಜ್ಯದ 42 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ 27 ಮಂದಿ ಸರ್ಕಾರಿ ಶಾಲೆಗಳ ಮಕ್ಕಳು. </strong></em></p>.<p><em><strong>–ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವ.</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಮಕ್ಕಳ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಸಮುದಾಯದ ಸಹಭಾಗಿತ್ವಕ್ಕೆ ಸುಮಾರು 72 ಕಂಪನಿಗಳು ಆಸಕ್ತಿ ತೋರಿಸಿದ್ದು, ಕಂಪ್ಯೂಟರ್, ಟ್ಯಾಬ್ ಸಹಿತ ಹಲವು ರೀತಿಯಲ್ಲಿ ಕೊಡುಗೆ ನೀಡುವ ವಾಗ್ದಾನ ಮಾಡಿವೆ.</p>.<p>ವಿಕಾಸಸೌಧದಲ್ಲಿ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ‘ಸಾರ್ವಜನಿಕ ಶಿಕ್ಷಣ ಬಲಪಡಿಸುವಲ್ಲಿ ಖಾಸಗಿ ಸಹಭಾಗಿತ್ವ’ ಕುರಿತ ಸಂವಾದದಲ್ಲಿ ಈ ಕಂಪನಿಗಳು ಸುಮಾರು ₹150 ಕೋಟಿ ವೆಚ್ಚದ ಕಾಮಗಾರಿಗಳು, ಕೊಡುಗೆಗಳನ್ನು ನೀಡುವತಮ್ಮ ಬದ್ಧತೆ ಪ್ರದರ್ಶಿಸಿದವು.</p>.<p>ಇದುವರೆಗೆ ಶಾಲಾ ಕಟ್ಟಡ, ಕೊಠಡಿಗಳನ್ನು ನಿರ್ಮಿಸಲು ಮುಂದಾಗುತ್ತಿದ್ದ ಭಾರತೀಯ ಯುವ ತೇರಾಪಂತ್ ಸಮಿತಿಯ ವಿಮಲ್ ಕಠಾರಿಯಾ, ಶಾಲೆಗಳಿಗೆ ಎಲೆಕ್ಟ್ರಾನಿಕ್ ವಸ್ತುಗಳನ್ನು ನೀಡುವ<br />ಉಪಕ್ರಮಕ್ಕೆ ಮುಂದಾಗಿರುವುದಾಗಿ ಪ್ರಕಟಿಸಿದರು ಹಾಗೂ ಸಾಂಕೇತಿಕವಾಗಿ ಕಂಪ್ಯೂಟರ್, ಲ್ಯಾಪ್ಟಾಪ್ಗಳನ್ನು ಹಸ್ತಾಂತರಿಸಿದರು.</p>.<p>‘100 ಶಾಲಾ ಕೊಠಡಿಗಳ ನಿರ್ಮಾಣ ಪ್ರಗತಿಯಲ್ಲಿವೆ, ಇನ್ನು ನಾವು ಶಾಲೆಗಳಲ್ಲಿ ಹಸಿರೀಕರಣ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಆದ್ಯತೆ ನೀಡಲಿದ್ದೇವೆ’ ಎಂದರು.</p>.<p>ಸ್ಯಾಮ್ಸಂಗ್ ಕಂಪನಿಯಿಂದ ತುಮಕೂರು ಮತ್ತು ರಾಮನಗರ ಜಿಲ್ಲೆಯ 50 ಶಾಲೆಗಳಿಗೆ 1,000 ಇ-ಕಂಟೆಂಟ್ ಸಮೇತ ಟ್ಯಾಬ್ಗಳನ್ನು ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ<br />50 ಶಾಲೆಗಳಿಗೆ 1,000 ಟ್ಯಾಬ್ಗಳನ್ನು ಒದಗಿಸುವುದಾಗಿತಿಳಿಸಲಾಯಿತು.</p>.<p>ದೆಹಲಿಯ ಥಿಂಕ್ ಥ್ರೂ ಕನ್ಸಲ್ಟೆಂಟ್ಸ್,ಬಿಐಎಲ್, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ , ಎಂಬೆಸಿ ಗ್ರೂಪ್, ಬಯೋಕಾನ್, ಎಚ್ಪಿಇಂಡಿಯಾ, ಟೊಯೊಟಾ, ಅಜೀಂ ಪ್ರೇಮ್ಜಿ ಪ್ರತಿಷ್ಠಾನ ಮೊದಲಾದ ಕಂಪನಿಗಳು, ಸೇವಾ ಸಂಸ್ಥೆಗಳಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<p><em><strong>ಪ್ರಧಾನಿ ಜತೆಗಿನ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮಕ್ಕೆ ರಾಜ್ಯದ 42 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಇದರಲ್ಲಿ 27 ಮಂದಿ ಸರ್ಕಾರಿ ಶಾಲೆಗಳ ಮಕ್ಕಳು. </strong></em></p>.<p><em><strong>–ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವ.</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>