<p><strong>ಬೆಂಗಳೂರು</strong>: ಬೆಂಗಳೂರು ರಾಯಲ್ ಚಾಲೆಂಜರ್ಸ್(ಆರ್ಸಿಬಿ) ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀ ಹಿಂದುಳಿದ ಮಠಾಧೀಶರ ಮಹಾಸಭಾವು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೂರು ಸಲ್ಲಿಸಿದೆ. ಮಹಾದುರಂತದಿಂದ 11 ಮಂದಿ ಮೃತಪಟ್ಟು, 64 ಮಂದಿ ಗಾಯಗೊಂಡಿದ್ದರು.</p>.<p>ಮಹಾಸಭಾದ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ನೇತೃತ್ವದ ನಿಯೋಗವು ಇ.ಡಿ ನಿರ್ದೇಶಕರಿಗೆ ದೂರು ಸಲ್ಲಿಸಿತು.</p>.<p>‘ಮಹಾದುರಂತಕ್ಕೆ ಆರ್ಸಿಬಿ ಮ್ಯಾನೇಜ್ಮೆಂಟ್ ಕಾರಣವಾಗಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಆಗಬೇಕು’ ಎಂದು ಸ್ವಾಮೀಜಿ ಆಗ್ರಹಿಸಿದರು.</p>.<p>‘ಕ್ರಿಕೆಟ್ ಅನ್ನು ಆರ್ಸಿಬಿ ವಾಣಿಜ್ಯೋದ್ಯಮಕ್ಕಾಗಿ ಬಳಸಿಕೊಂಡಿದೆ. ಆರ್ಸಿಬಿ ಹಣಕಾಸು ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು. ಕಾರ್ಯಕ್ರಮಕ್ಕೆಂದು ಹಣ ಸಂಗ್ರಹಿಸಿ ಬೇರೆ ಕಡೆ ಬಳಸಿದ್ದಾರೆ. ಅದರ ಬಗ್ಗೆಯೂ ವಿಚಾರಣೆ ನಡೆಸಬೇಕು. ಕೆಎಸ್ಸಿಎ ವಿರುದ್ಧವೂ ತನಿಖೆ ನಡೆಸಬೇಕು’ ಎಂದು ಸ್ವಾಮೀಜಿ ಪತ್ರದಲ್ಲಿ ಆಗ್ರಹಿಸಿದ್ದಾರೆ.</p>.<p>ಸಿಎಂ, ಡಿಸಿಎಂ ವಿರುದ್ಧವೂ ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಮತ್ತು ಆರ್ಸಿಬಿ ಆಡಳಿತ ಮಂಡಳಿ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಿ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೂ ದೂರು ಸಲ್ಲಿಸಲಾಗಿದೆ.</p>.<p>ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವನಾಗಿದೇವ ಸ್ವಾಮೀಜಿ, ಬಸವಮೂರ್ತಿ ಸ್ವಾಮೀಜಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ರಾಯಲ್ ಚಾಲೆಂಜರ್ಸ್(ಆರ್ಸಿಬಿ) ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀ ಹಿಂದುಳಿದ ಮಠಾಧೀಶರ ಮಹಾಸಭಾವು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೂರು ಸಲ್ಲಿಸಿದೆ. ಮಹಾದುರಂತದಿಂದ 11 ಮಂದಿ ಮೃತಪಟ್ಟು, 64 ಮಂದಿ ಗಾಯಗೊಂಡಿದ್ದರು.</p>.<p>ಮಹಾಸಭಾದ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ನೇತೃತ್ವದ ನಿಯೋಗವು ಇ.ಡಿ ನಿರ್ದೇಶಕರಿಗೆ ದೂರು ಸಲ್ಲಿಸಿತು.</p>.<p>‘ಮಹಾದುರಂತಕ್ಕೆ ಆರ್ಸಿಬಿ ಮ್ಯಾನೇಜ್ಮೆಂಟ್ ಕಾರಣವಾಗಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಆಗಬೇಕು’ ಎಂದು ಸ್ವಾಮೀಜಿ ಆಗ್ರಹಿಸಿದರು.</p>.<p>‘ಕ್ರಿಕೆಟ್ ಅನ್ನು ಆರ್ಸಿಬಿ ವಾಣಿಜ್ಯೋದ್ಯಮಕ್ಕಾಗಿ ಬಳಸಿಕೊಂಡಿದೆ. ಆರ್ಸಿಬಿ ಹಣಕಾಸು ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು. ಕಾರ್ಯಕ್ರಮಕ್ಕೆಂದು ಹಣ ಸಂಗ್ರಹಿಸಿ ಬೇರೆ ಕಡೆ ಬಳಸಿದ್ದಾರೆ. ಅದರ ಬಗ್ಗೆಯೂ ವಿಚಾರಣೆ ನಡೆಸಬೇಕು. ಕೆಎಸ್ಸಿಎ ವಿರುದ್ಧವೂ ತನಿಖೆ ನಡೆಸಬೇಕು’ ಎಂದು ಸ್ವಾಮೀಜಿ ಪತ್ರದಲ್ಲಿ ಆಗ್ರಹಿಸಿದ್ದಾರೆ.</p>.<p>ಸಿಎಂ, ಡಿಸಿಎಂ ವಿರುದ್ಧವೂ ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಮತ್ತು ಆರ್ಸಿಬಿ ಆಡಳಿತ ಮಂಡಳಿ ವಿರುದ್ಧವೂ ಕ್ರಮಕ್ಕೆ ಆಗ್ರಹಿಸಿ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೂ ದೂರು ಸಲ್ಲಿಸಲಾಗಿದೆ.</p>.<p>ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಬಸವನಾಗಿದೇವ ಸ್ವಾಮೀಜಿ, ಬಸವಮೂರ್ತಿ ಸ್ವಾಮೀಜಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>