ಬೆಂಗಳೂರು: 41 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರರೊಬ್ಬರಿಗೆ ₹ 20 ಸಾವಿರ ದಂಡ ವಿಧಿಸಲಾಗಿದೆ.
‘ಜೀವನ್ಬಿಮಾನಗರ ಸಂಚಾರ ಠಾಣೆ ಎಎಸ್ಐ ರಾಮಚಂದ್ರೇಗೌಡ, ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅದೇ ವೇಳೆ ಸ್ಥಳಕ್ಕೆ ಬಂದಿದ್ದ ಬೈಕ್ ಸವಾರರೊಬ್ಬರನ್ನು ತಡೆದು ತಪಾಸಣೆ ನಡೆಸಿದ್ದರು. ಅವರು 41 ಬಾರಿ ನಿಯಮ ಉಲ್ಲಂಘಿಸಿದ್ದು ಗೊತ್ತಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಬೈಕ್ ಜಪ್ತಿ ಮಾಡಿದ ಎಎಸ್ಐ, ಸವಾರರಿಗೆ ದಂಡ ರಶೀದಿ ನೀಡಿದರು. ನಿಯಮದಂತೆ, ಸಂಚಾರ ನಿಯಮಗಳ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ ಬೈಕ್ ಬಿಡುಗಡೆ ಮಾಡಲಾಗುವುದು’ ಎಂದೂ ತಿಳಿಸಿವೆ.