<p><strong>ಯಲಹಂಕ:</strong> ಕೆರೆಗಳಿಗೆ ಅಕ್ರಮವಾಗಿ ಕೊಳಚೆ ನೀರು ಬಿಡುವವರಿಗೆ ₹5 ಲಕ್ಷದವರೆಗೆ ದಂಡ ವಿಧಿಸುವುದರ ಜೊತೆಗೆ ಒಳಚರಂಡಿ ಸಂಪರ್ಕವನ್ನು ಕಡಿತಗೊಳಿಸಲಾಗುವುದು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಎಚ್ಚರಿಸಿದರು.</p>.<p>ಹಾರೋಹಳ್ಳಿ ಕೆರೆಯ ಆವರಣದಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸಾರ್ವಜನಿಕರು ಕೆರೆಗಳಿಗೆ ಯಾವುದೇ ಕೊಳಚೆ ನೀರು ಸೇರದಂತೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು. </p>.<p>‘ಕೆರೆಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆರೆಗಳು ಉಳಿದರೆ ನಮಗೆಲ್ಲ ಕುಡಿಯುವ ನೀರು ಸಿಗುತ್ತದೆ. ಪರಿಸರ ಚೆನ್ನಾಗಿರುತ್ತದೆ’ ಎಂದರು.</p>.<p>ಸಂಜೆ ವೇಳೆ ಮಹಿಳೆಯರು ಮತ್ತು ಮಕ್ಕಳು ವಾಯುವಿಹಾರಕ್ಕಾಗಿ ಕೆರೆಗೆ ಬರುತ್ತಿದ್ದರು. ಅವರಿಗೆ ಕತ್ತಲಲ್ಲಿ ವಾಕಿಂಗ್ ಮಾಡಲು ಭಯಪಡುತ್ತಿದ್ದರು. ಈ ದಿಸೆಯಲ್ಲಿ ಕೆರೆಯ ಸುತ್ತಲೂ ₹50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ’ ಎಂದು ಹೇಳಿದರು.</p>.<p>ಜಲನಿಧಿ ಪ್ರತಿಷ್ಠಾನದ ಅಧ್ಯಕ್ಷ ಎನ್.ಶಿವಕುಮಾರ್, ಕಾರ್ಯಾಧ್ಯಕ್ಷ ಸಂಜೀವ್ ರೆಡ್ಡಿ, ಬಿಜೆಪಿ ಮುಖಂಡರಾದ ಮಧುಸೂದನನ್ ಎ.ಎನ್, ಕಿರಣ್.ಎಚ್.ಎಸ್, ಮಂಜುನಾಥ್, ಸುಧಾಕರ್, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಕೆರೆಗಳಿಗೆ ಅಕ್ರಮವಾಗಿ ಕೊಳಚೆ ನೀರು ಬಿಡುವವರಿಗೆ ₹5 ಲಕ್ಷದವರೆಗೆ ದಂಡ ವಿಧಿಸುವುದರ ಜೊತೆಗೆ ಒಳಚರಂಡಿ ಸಂಪರ್ಕವನ್ನು ಕಡಿತಗೊಳಿಸಲಾಗುವುದು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಎಚ್ಚರಿಸಿದರು.</p>.<p>ಹಾರೋಹಳ್ಳಿ ಕೆರೆಯ ಆವರಣದಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸಾರ್ವಜನಿಕರು ಕೆರೆಗಳಿಗೆ ಯಾವುದೇ ಕೊಳಚೆ ನೀರು ಸೇರದಂತೆ ಗಮನಹರಿಸಬೇಕು’ ಎಂದು ಸಲಹೆ ನೀಡಿದರು. </p>.<p>‘ಕೆರೆಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆರೆಗಳು ಉಳಿದರೆ ನಮಗೆಲ್ಲ ಕುಡಿಯುವ ನೀರು ಸಿಗುತ್ತದೆ. ಪರಿಸರ ಚೆನ್ನಾಗಿರುತ್ತದೆ’ ಎಂದರು.</p>.<p>ಸಂಜೆ ವೇಳೆ ಮಹಿಳೆಯರು ಮತ್ತು ಮಕ್ಕಳು ವಾಯುವಿಹಾರಕ್ಕಾಗಿ ಕೆರೆಗೆ ಬರುತ್ತಿದ್ದರು. ಅವರಿಗೆ ಕತ್ತಲಲ್ಲಿ ವಾಕಿಂಗ್ ಮಾಡಲು ಭಯಪಡುತ್ತಿದ್ದರು. ಈ ದಿಸೆಯಲ್ಲಿ ಕೆರೆಯ ಸುತ್ತಲೂ ₹50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ’ ಎಂದು ಹೇಳಿದರು.</p>.<p>ಜಲನಿಧಿ ಪ್ರತಿಷ್ಠಾನದ ಅಧ್ಯಕ್ಷ ಎನ್.ಶಿವಕುಮಾರ್, ಕಾರ್ಯಾಧ್ಯಕ್ಷ ಸಂಜೀವ್ ರೆಡ್ಡಿ, ಬಿಜೆಪಿ ಮುಖಂಡರಾದ ಮಧುಸೂದನನ್ ಎ.ಎನ್, ಕಿರಣ್.ಎಚ್.ಎಸ್, ಮಂಜುನಾಥ್, ಸುಧಾಕರ್, ಹರೀಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>