‘ತಿಮ್ಮೇಗೌಡ ಅವರು ಮಗನ ಮನೆಗೆ ಬಂದಿದ್ದರು. ಜುಲೈ 20ರಂದು ಊರಿಗೆ ವಾಪಸ್ ತೆರಳಲು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದರು. ಮಾರ್ಗ ಮಧ್ಯದಲ್ಲಿ ಮೆಟ್ರೊ ರೈಲಿನ ಒಳಗೆ ಕುಸಿದು ಬಿದ್ದಿದ್ದರು. ಅವರನ್ನು ಪ್ರಯಾಣಿಕರು ಎಂ.ಜಿ ರಸ್ತೆ ನಿಲ್ದಾಣದಲ್ಲಿ ಇಳಿಸಿದ್ದರು. ನಿಲ್ದಾಣದಲ್ಲಿದ್ದ ಪ್ರಯಾಣಿಕರೇ ಅವರನ್ನು ಆಟೊದಲ್ಲಿ ಕರೆದೊಯ್ದು ಇನ್ಫೆಂಟ್ರಿ ರಸ್ತೆಯ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ.