‘ಹಲವು ದಿನವಾದರೂ ಮಗಳು ಹಾಗೂ ಅಳಿಯ, ನಿವೇಶನ ಖರೀದಿಸಿ ಕೊಟ್ಟಿರಲಿಲ್ಲ. ಸಿಟ್ಟಾದ ಮುನಿವೆಂಕಟರಾಮ, ಹಣ ವಾಪಸು ಕೊಡುವಂತೆ ಒತ್ತಾಯಿಸಿದ್ದರು. ಅಷ್ಟಕ್ಕೆ ಕೋಪಗೊಂಡ ಮಗಳು ಹಾಗೂ ಅಳಿಯ, ಮನೆಯ ಕೊಠಡಿಯಲ್ಲೇ 5 ದಿನ ಕೂಡಿಹಾಕಿದ್ದರು. ಚಿತ್ರಹಿಂಸೆ ಸಹ ನೀಡಿದ್ದರು. ಸ್ಥಳೀಯರ ನೆರವಿನಿಂದ ಮನೆಯಿಂದ ತಪ್ಪಿಸಿಕೊಂಡಿದ್ದ ದೂರುದಾರ, ಠಾಣೆಗೆ ಬಂದು ದೂರು ನೀಡಿದ್ದಾರೆ. ವಿಚಾರಣೆ ಬಳಿಕವೇ ನಿಖರ ಮಾಹಿತಿ ತಿಳಿಯಲಿದೆ’ ಎಂದೂ ಮೂಲಗಳು ಹೇಳಿವೆ.