<p><strong>ಬೆಂಗಳೂರು</strong>:ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ಶಾಸಕ ಡಾ.ಎಚ್.ಡಿ ರಂಗನಾಥ್ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.</p>.<p>ಈ ಕುರಿತಂತೆ ಡಾ.ರಂಗನಾಥ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಪತ್ತು ನಿರ್ವಹಣಾ ಕಾಯ್ದೆ–2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇಕರ್ನಾಟಕ ಸಾಂಕ್ರಾಮಿಕ ಕಾಯಿಲೆಗಳು ಕಾಯ್ದೆ–2020 ಕಲಂ 5(4)ರ ಅಡಿಯಲ್ಲಿ ಸಂಜ್ಞೇಯ ಅಪರಾಧ ಎಂದು ಪರಿಗಣಿಸಿರುವ ಕಾರಣ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆಸಲ್ಲಿಸಲಾಗಿದೆ.</p>.<p>ಕುಣಿಗಲ್ ಉಪ ವಿಭಾಗದ ಪೊಲೀಸ್ ಠಾಣೆ ಅಧಿಕಾರಿಗೆ ನೋಟಿಸ್ ಮತ್ತು ಪಡುವಗೆರೆ ಗ್ರಾಮದ ಜಾತ್ಯತೀತ ಜನತಾದಳದ ಮುಖಂಡ ಪಿ.ಎಚ್.ಗೋವಿಂದರಾಜು ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಜೂನ್ 21ಕ್ಕೆ ನಿಗದಿಗೊಳಿಸಲಾಗಿದೆ.</p>.<p><strong>ಪ್ರಕರಣವೇನು?:</strong> ಹುಲಿಯೂರು ದುರ್ಗ ಹೋಬಳಿ ಬಂಡಿಹಳ್ಳಿ ಬೈಪಾಸ್ ರಸ್ತೆಯಲ್ಲಿ 2021ರ ಜೂನ್ 18ರಂದು ಗ್ರಾಮದ ರಮೇಶ್ ಎಂಬ ವ್ಯಕ್ತಿ ಮಧ್ಯಾಹ್ನದ ವೇಳೆಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು.</p>.<p>ಈ ಘಟನೆ ನಡೆದ ನಂತರ ಕುಣಿಗಲ್ ಠಾಣೆಯ ಪೊಲೀಸರು ತತ್ಕ್ಷಣ ಕ್ರಮ ಕೈಗೊಂಡು ಶವ ಪರೀಕ್ಷೆಗೆ ಒಪ್ಪಿಸಿರಲಿಲ್ಲ. ವಿಷಯ ತಿಳಿದ ಕೂಡಲೇ ನಾನು ಸ್ಥಳಕ್ಕೆ ಧಾವಿಸಿದ್ದೆ. ಆಗ ಅಲ್ಲಿ ಜನಸ್ತೋಮವೇ ನೆರೆಯಿತು ಮತ್ತು ಈ ವೇಳೆ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿತ್ತು.</p>.<p>ಇದನ್ನೇ ನೆಪ ವಾಗಿಸಿಕೊಂಡು ಗೋವಿಂದರಾಜು ಮತ್ತು ಅವರ ಪಕ್ಷದವರು ಇದನ್ನು ರಾಜಕೀಯ ದುರು ದ್ದೇಶದಿಂದ; ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.</p>.<p>ಕೋವಿಡ್ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ 2021ರ ಜೂನ್ 29ರಂದು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದ್ದರಿಂದ. ಇದನ್ನು ರದ್ದುಗೊಳಿಸಬೇಕು’ ಡಾ.ರಂಗನಾಥ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕುಣಿಗಲ್ ಶಾಸಕ ಡಾ.ಎಚ್.ಡಿ ರಂಗನಾಥ್ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.</p>.<p>ಈ ಕುರಿತಂತೆ ಡಾ.ರಂಗನಾಥ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಪತ್ತು ನಿರ್ವಹಣಾ ಕಾಯ್ದೆ–2005ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇಕರ್ನಾಟಕ ಸಾಂಕ್ರಾಮಿಕ ಕಾಯಿಲೆಗಳು ಕಾಯ್ದೆ–2020 ಕಲಂ 5(4)ರ ಅಡಿಯಲ್ಲಿ ಸಂಜ್ಞೇಯ ಅಪರಾಧ ಎಂದು ಪರಿಗಣಿಸಿರುವ ಕಾರಣ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆಸಲ್ಲಿಸಲಾಗಿದೆ.</p>.<p>ಕುಣಿಗಲ್ ಉಪ ವಿಭಾಗದ ಪೊಲೀಸ್ ಠಾಣೆ ಅಧಿಕಾರಿಗೆ ನೋಟಿಸ್ ಮತ್ತು ಪಡುವಗೆರೆ ಗ್ರಾಮದ ಜಾತ್ಯತೀತ ಜನತಾದಳದ ಮುಖಂಡ ಪಿ.ಎಚ್.ಗೋವಿಂದರಾಜು ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಜೂನ್ 21ಕ್ಕೆ ನಿಗದಿಗೊಳಿಸಲಾಗಿದೆ.</p>.<p><strong>ಪ್ರಕರಣವೇನು?:</strong> ಹುಲಿಯೂರು ದುರ್ಗ ಹೋಬಳಿ ಬಂಡಿಹಳ್ಳಿ ಬೈಪಾಸ್ ರಸ್ತೆಯಲ್ಲಿ 2021ರ ಜೂನ್ 18ರಂದು ಗ್ರಾಮದ ರಮೇಶ್ ಎಂಬ ವ್ಯಕ್ತಿ ಮಧ್ಯಾಹ್ನದ ವೇಳೆಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದರು.</p>.<p>ಈ ಘಟನೆ ನಡೆದ ನಂತರ ಕುಣಿಗಲ್ ಠಾಣೆಯ ಪೊಲೀಸರು ತತ್ಕ್ಷಣ ಕ್ರಮ ಕೈಗೊಂಡು ಶವ ಪರೀಕ್ಷೆಗೆ ಒಪ್ಪಿಸಿರಲಿಲ್ಲ. ವಿಷಯ ತಿಳಿದ ಕೂಡಲೇ ನಾನು ಸ್ಥಳಕ್ಕೆ ಧಾವಿಸಿದ್ದೆ. ಆಗ ಅಲ್ಲಿ ಜನಸ್ತೋಮವೇ ನೆರೆಯಿತು ಮತ್ತು ಈ ವೇಳೆ ಕೋವಿಡ್ ನಿಯಮಾವಳಿಗಳು ಜಾರಿಯಲ್ಲಿತ್ತು.</p>.<p>ಇದನ್ನೇ ನೆಪ ವಾಗಿಸಿಕೊಂಡು ಗೋವಿಂದರಾಜು ಮತ್ತು ಅವರ ಪಕ್ಷದವರು ಇದನ್ನು ರಾಜಕೀಯ ದುರು ದ್ದೇಶದಿಂದ; ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.</p>.<p>ಕೋವಿಡ್ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ 2021ರ ಜೂನ್ 29ರಂದು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದ್ದರಿಂದ. ಇದನ್ನು ರದ್ದುಗೊಳಿಸಬೇಕು’ ಡಾ.ರಂಗನಾಥ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>