<p><strong>ದಾಬಸ್ಪೇಟೆ</strong>: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಗಂಗೇನಪುರ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡವನ್ನು ವ್ಯಕ್ತಿಯೊಬ್ಬ ಕೆಡವಿದ್ದು, ಈ ಸಂಬಂಧ ಭಾನುಪ್ರಕಾಶ್ ಎಂಬಾತನ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಅವರು ದೂರು ನೀಡಿದ್ದಾರೆ.</p>.<p>ಹಿಂದೆ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಿತ್ತು. ಮಕ್ಕಳು ಕಡಿಮೆಯಾದ ನಂತರ 1995-96ರಲ್ಲಿ ಶಾಲೆಯನ್ನು ಕಿರಿಯ ಪ್ರಾಥಮಿಕ ಶಾಲೆಗಷ್ಟೇ ಸೀಮಿತಗೊಳಿಸಲಾಯಿತು. ಪ್ರಸ್ತುತ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದು, ಸುಮಾರು 20 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಕಟ್ಟಡವನ್ನು ಭಾನುಪ್ರಕಾಶ್ ಜೆಸಿಬಿಯಿಂದ ನೆಲಸಮ ಮಾಡಿದ್ದಾರೆ. ಅಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಈ ಶಾಲೆಯಲ್ಲಿ ಓದಿದ ಅನೇಕರು ಅತ್ಯುನ್ನತ ಸ್ಥಾನದಲ್ಲಿದ್ದಾರೆ. ಯಾವುದೇ ಅನುಮತಿ ಅಥವಾ ದಾಖಲೆ ಇಲ್ಲದೆ ಅದನ್ನು ಕೆಡವಲು ಇವರಿಗೆ ಅನುಮತಿ ಕೊಟ್ಟವರು ಯಾರು’ ಎಂದು ಪಂಚಾಯಿತಿ ಸದಸ್ಯ ದಿನೇಶ ನಾಯಕ ಪ್ರಶ್ನಿಸಿದ್ಧಾರೆ.</p>.<p>‘ಶಾಲೆಯ ಕಟ್ಟಡ ಶಿಕ್ಷಣ ಇಲಾಖೆಗೆ ಸೇರಿದ್ದು, 1995ರಿಂದ ಶಾಲೆಯ ಜಾಗ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲಾತಿ ಇದೆ. ಆದರೂ ಖಾಸಗಿ ವ್ಯಕ್ತಿ ಶಾಲೆಯನ್ನು ಕೆಡವಿದ್ದಾರೆ. ಈ ಕುರಿತು ಪೋಲಿಸ್ ಇಲಾಖೆಗೆ ದೂರು ನೀಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ ತಿಳಿಸಿದ್ದಾರೆ.</p>.<p>ದಾಬಸ್ಪೇಟೆ ಠಾಣೆಯ ಪೋಲಿಸ್ ಸಿಬ್ಬಂದಿ ಮತ್ತು ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ</strong>: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಗಂಗೇನಪುರ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡವನ್ನು ವ್ಯಕ್ತಿಯೊಬ್ಬ ಕೆಡವಿದ್ದು, ಈ ಸಂಬಂಧ ಭಾನುಪ್ರಕಾಶ್ ಎಂಬಾತನ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲಾ ಮುಖ್ಯ ಶಿಕ್ಷಕಿ ನಾಗರತ್ನ ಅವರು ದೂರು ನೀಡಿದ್ದಾರೆ.</p>.<p>ಹಿಂದೆ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಿತ್ತು. ಮಕ್ಕಳು ಕಡಿಮೆಯಾದ ನಂತರ 1995-96ರಲ್ಲಿ ಶಾಲೆಯನ್ನು ಕಿರಿಯ ಪ್ರಾಥಮಿಕ ಶಾಲೆಗಷ್ಟೇ ಸೀಮಿತಗೊಳಿಸಲಾಯಿತು. ಪ್ರಸ್ತುತ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದು, ಸುಮಾರು 20 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಕಟ್ಟಡವನ್ನು ಭಾನುಪ್ರಕಾಶ್ ಜೆಸಿಬಿಯಿಂದ ನೆಲಸಮ ಮಾಡಿದ್ದಾರೆ. ಅಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.</p>.<p>‘ಈ ಶಾಲೆಯಲ್ಲಿ ಓದಿದ ಅನೇಕರು ಅತ್ಯುನ್ನತ ಸ್ಥಾನದಲ್ಲಿದ್ದಾರೆ. ಯಾವುದೇ ಅನುಮತಿ ಅಥವಾ ದಾಖಲೆ ಇಲ್ಲದೆ ಅದನ್ನು ಕೆಡವಲು ಇವರಿಗೆ ಅನುಮತಿ ಕೊಟ್ಟವರು ಯಾರು’ ಎಂದು ಪಂಚಾಯಿತಿ ಸದಸ್ಯ ದಿನೇಶ ನಾಯಕ ಪ್ರಶ್ನಿಸಿದ್ಧಾರೆ.</p>.<p>‘ಶಾಲೆಯ ಕಟ್ಟಡ ಶಿಕ್ಷಣ ಇಲಾಖೆಗೆ ಸೇರಿದ್ದು, 1995ರಿಂದ ಶಾಲೆಯ ಜಾಗ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲಾತಿ ಇದೆ. ಆದರೂ ಖಾಸಗಿ ವ್ಯಕ್ತಿ ಶಾಲೆಯನ್ನು ಕೆಡವಿದ್ದಾರೆ. ಈ ಕುರಿತು ಪೋಲಿಸ್ ಇಲಾಖೆಗೆ ದೂರು ನೀಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ತಿಮ್ಮಯ್ಯ ತಿಳಿಸಿದ್ದಾರೆ.</p>.<p>ದಾಬಸ್ಪೇಟೆ ಠಾಣೆಯ ಪೋಲಿಸ್ ಸಿಬ್ಬಂದಿ ಮತ್ತು ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>