<p><strong>ಬೆಂಗಳೂರು:</strong> ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕಾರಾಗೃಹ ಇಲಾಖೆ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಖಲೀಂ ಹಾಗೂ ಕೆ.ಎಸ್.ಅನಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.</p>.<p>ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಟ್ರಾರ್ಜ್ ಪ್ರಿಸನರ್ಸ್ ಪುನರ್ವಸತಿ (ಏಡ್) ಸೊಸೈಟಿಯ ನಿವೇಶನ ಕಾರಾಗೃಹ ಇಲಾಖೆಗೆ ಸೇರಿದೆ. ಈ ನಿವೇಶನದಲ್ಲಿ ಖಲೀಂ ಎಂಬಾತ ಗುಜರಿ ವಸ್ತುಗಳನ್ನು ಸಂಗ್ರಹಿಸುವ ಗೋದಾಮು ಮಾಡಿಕೊಂಡಿದ್ದಾರೆ. ಹಲವು ಬಾರಿ ವಸ್ತುಗಳನ್ನು ತೆರವು ಮಾಡುವಂತೆ ಸೂಚಿಸಿದರೂ ತೆರವು ಮಾಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಅದೇ ಕಟ್ಟಡದ ಒಂದನೇ ಮಹಡಿಯಲ್ಲಿರುವ ಒಂದು ಕೊಠಡಿಯನ್ನು ಅನಿಲ್ ಅತಿಕ್ರಮಿಸಿಕೊಂಡು ಕಚೇರಿ ನಡೆಸುತ್ತಿದ್ದಾರೆ. ಅದಕ್ಕೆ ಇಲಾಖೆಯ ಅನುಮತಿ ಪಡೆದಿಲ್ಲ. ಸರ್ಕಾರಿ ಸ್ವತ್ತು ಅತಿಕ್ರಮಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನಿವೇಶನ ತೆರವುಗೊಳಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಕಾರಾಗೃಹ ಇಲಾಖೆ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಖಲೀಂ ಹಾಗೂ ಕೆ.ಎಸ್.ಅನಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.</p>.<p>ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಟ್ರಾರ್ಜ್ ಪ್ರಿಸನರ್ಸ್ ಪುನರ್ವಸತಿ (ಏಡ್) ಸೊಸೈಟಿಯ ನಿವೇಶನ ಕಾರಾಗೃಹ ಇಲಾಖೆಗೆ ಸೇರಿದೆ. ಈ ನಿವೇಶನದಲ್ಲಿ ಖಲೀಂ ಎಂಬಾತ ಗುಜರಿ ವಸ್ತುಗಳನ್ನು ಸಂಗ್ರಹಿಸುವ ಗೋದಾಮು ಮಾಡಿಕೊಂಡಿದ್ದಾರೆ. ಹಲವು ಬಾರಿ ವಸ್ತುಗಳನ್ನು ತೆರವು ಮಾಡುವಂತೆ ಸೂಚಿಸಿದರೂ ತೆರವು ಮಾಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.</p>.<p>ಅದೇ ಕಟ್ಟಡದ ಒಂದನೇ ಮಹಡಿಯಲ್ಲಿರುವ ಒಂದು ಕೊಠಡಿಯನ್ನು ಅನಿಲ್ ಅತಿಕ್ರಮಿಸಿಕೊಂಡು ಕಚೇರಿ ನಡೆಸುತ್ತಿದ್ದಾರೆ. ಅದಕ್ಕೆ ಇಲಾಖೆಯ ಅನುಮತಿ ಪಡೆದಿಲ್ಲ. ಸರ್ಕಾರಿ ಸ್ವತ್ತು ಅತಿಕ್ರಮಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನಿವೇಶನ ತೆರವುಗೊಳಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>