<p><strong>ಬೆಂಗಳೂರು:</strong> ಖಾಸಗಿ ಗುತ್ತಿಗೆದಾರ ಸಂಸ್ಥೆ ಜತೆ ಶಾಮೀಲಾಗಿ ಬೆಂಗಳೂರು ವಿದ್ಯುತ್ ಪ್ರಸರಣ ನಿಗಮಕ್ಕೆ (ಬೆಸ್ಕಾಂ) ₹ 18.5 ಕೋಟಿ ನಷ್ಟ ಉಂಟು ಮಾಡಿದ ಆರೋಪದಡಿ ಬೆಸ್ಕಾಂನ ಮಾಜಿ ಕಾನೂನು ಅಧಿಕಾರಿ ಕೆ.ವಿನಾಯಕ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಈ ಸಂಬಂಧ ನಿಗಮದ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗ) ಡಾ.ಎಂ.ಮಹೇಶ್ ಅವರು ಶನಿವಾರ ದೂರು ಕೊಟ್ಟಿದ್ದಾರೆ. ವಂಚನೆ (ಐಪಿಸಿ 420), ಅಪರಾಧ ಸಂಚು (120ಬಿ) ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ<br />ಉಂಟು ಮಾಡಿದ (409) ಆರೋಪಗಳಡಿ ಎಫ್ಐಆರ್ ದಾಖಲಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ವಿನಾಯಕ್ ಅವರಿಗೆ ಸೂಚಿಸಿದ್ದಾರೆ.</p>.<p><strong>ದೂರಿನ ವಿವರ:</strong> ‘ಜ್ಞಾನಭಾರತಿಯ ಬಿಡಿಎ ಲೇಔಟ್ ನಿವಾಸಿಯಾದ ವಿನಾಯಕ್, ಹೊರಗುತ್ತಿಗೆ ಆಧಾರದಡಿ 2010ರ ಜೂನ್ನಿಂದ 2018ರ ಆಗಸ್ಟ್ವರೆಗೆಕೆ.ಜಿ.ವೃತ್ತದ ಬೆಸ್ಕಾಂ ಕಚೇರಿಯಲ್ಲಿ ಕಾನೂನು ಅಧಿಕಾರಿಯಾಗಿದ್ದರು. ಬೆಸ್ಕಾಂಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾನೂನು ಹೋರಾಟಕ್ಕೆ ಸಲಹೆಗಳನ್ನು ಕೊಡುವುದು ಇವರ ಕೆಲಸವಾಗಿತ್ತು’ ಎಂದು ಮಹೇಶ್ ದೂರಿನಲ್ಲಿ ವಿವರಿಸಿದ್ದಾರೆ.</p>.<p>‘ರಾಜೀವ್ ಗಾಂಧಿ ಗ್ರಾಮೀಣ ವಿದ್ಯುತ್ ಯೋಜನೆಯಡಿ ನಾಲ್ಕು ಜಿಲ್ಲೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ಬೆಸ್ಕಾಂ ಮತ್ತು ಎಸ್ಪಿಎಂಲ್ ನಡುವೆ ತಕರಾರು ಉಂಟಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಮಧ್ಯಸ್ಥಿಕೆ ಕೇಂದ್ರವು (ಅರ್ಬಿಟ್ರಲ್ ಟ್ರಿಬ್ಯುನಲ್), ‘₹ 18.5 ಕೋಟಿಯನ್ನು ಗುತ್ತಿಗೆದಾರ ಸಂಸ್ಥೆಗೆ ನೀಡಬೇಕು’ ಎಂದು ಇದೇ ಮಾರ್ಚ್ನಲ್ಲಿ ಆದೇಶಿಸಿತು.’</p>.<p>‘ಈ ತೀರ್ಪಿನ ವಿರುದ್ಧ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 90 ದಿನಗಳ ಕಾಲವಕಾಶವನ್ನೂ ನೀಡಲಾಗಿತ್ತು. ಆದರೆ, ವಿನಾಯಕ್ ಆ ಕೆಲಸವನ್ನು ಸರಿಯಾಗಿ ಮಾಡಲಿಲ್ಲ. ಗುತ್ತಿಗೆದಾರರ ಪರವಾಗಿ ನಿಂತುಕೊಂಡಿದ್ದ ಅವರು, ಮುಂದಿನ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದರು.’</p>.<p>‘ಮೇಲ್ಮನವಿ ಸಲ್ಲಿಸುವುದಾಗಿ ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಂಡು ವಕಲತ್ತು ಸಹಿಯನ್ನೂ ಸಂಗ್ರಹಿಸಿದ್ದ ಅವರು, ಆ ಕಡತವನ್ನು ಉದ್ದೇಶಪೂರ್ವಕವಾಗಿ ತಮ್ಮ ಬಳಿಯೇ ಇಟ್ಟುಕೊಂಡರು. ಇದರಿಂದ ನಿಗದಿತ ಅವಧಿಯೊಳಗೆ ಮೇಲ್ಮನವಿ ಸಲ್ಲಿಸಲು ಆಗದೆ, ನಮ್ಮ ವಿರೋಧಿ ಗುತ್ತಿಗೆದಾರ ಕಂಪನಿಗೆ ₹ 18.5 ಕೋಟಿ ಪಾವತಿಸಬೇಕಾಯಿತು. ಹೀಗಾಗಿ, ಆರೋಪಿ ಸ್ಥಾನದಲ್ಲಿದ್ದ ಕಂಪನಿ ಜತೆ ಶಾಮೀಲಾಗಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ವಿನಾಯಕ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮಹೇಶ್ ದೂರಿನಲ್ಲಿ ಮನವಿ ಮಾಡಿದ್ದಾರೆ.</p>.<p><strong>ಸದ್ಯದಲ್ಲೇ ಹೊಸಬರ ನೇಮಕ</strong><br />‘ಮೇಲ್ಮನವಿ ಸಲ್ಲಿಸಲು ವಿಳಂಬ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಕಾನೂನು ತಜ್ಞರು ಸಲಹೆ ಕೊಟ್ಟಿದ್ದಾರೆ. ಹೀಗಾಗಿ ದೂರು ಕೊಟ್ಟಿದ್ದೇವೆ. ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಈಗ ನಿವೃತ್ತ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಮಹೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಾಸಗಿ ಗುತ್ತಿಗೆದಾರ ಸಂಸ್ಥೆ ಜತೆ ಶಾಮೀಲಾಗಿ ಬೆಂಗಳೂರು ವಿದ್ಯುತ್ ಪ್ರಸರಣ ನಿಗಮಕ್ಕೆ (ಬೆಸ್ಕಾಂ) ₹ 18.5 ಕೋಟಿ ನಷ್ಟ ಉಂಟು ಮಾಡಿದ ಆರೋಪದಡಿ ಬೆಸ್ಕಾಂನ ಮಾಜಿ ಕಾನೂನು ಅಧಿಕಾರಿ ಕೆ.ವಿನಾಯಕ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಈ ಸಂಬಂಧ ನಿಗಮದ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗ) ಡಾ.ಎಂ.ಮಹೇಶ್ ಅವರು ಶನಿವಾರ ದೂರು ಕೊಟ್ಟಿದ್ದಾರೆ. ವಂಚನೆ (ಐಪಿಸಿ 420), ಅಪರಾಧ ಸಂಚು (120ಬಿ) ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ<br />ಉಂಟು ಮಾಡಿದ (409) ಆರೋಪಗಳಡಿ ಎಫ್ಐಆರ್ ದಾಖಲಿಸಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ವಿನಾಯಕ್ ಅವರಿಗೆ ಸೂಚಿಸಿದ್ದಾರೆ.</p>.<p><strong>ದೂರಿನ ವಿವರ:</strong> ‘ಜ್ಞಾನಭಾರತಿಯ ಬಿಡಿಎ ಲೇಔಟ್ ನಿವಾಸಿಯಾದ ವಿನಾಯಕ್, ಹೊರಗುತ್ತಿಗೆ ಆಧಾರದಡಿ 2010ರ ಜೂನ್ನಿಂದ 2018ರ ಆಗಸ್ಟ್ವರೆಗೆಕೆ.ಜಿ.ವೃತ್ತದ ಬೆಸ್ಕಾಂ ಕಚೇರಿಯಲ್ಲಿ ಕಾನೂನು ಅಧಿಕಾರಿಯಾಗಿದ್ದರು. ಬೆಸ್ಕಾಂಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾನೂನು ಹೋರಾಟಕ್ಕೆ ಸಲಹೆಗಳನ್ನು ಕೊಡುವುದು ಇವರ ಕೆಲಸವಾಗಿತ್ತು’ ಎಂದು ಮಹೇಶ್ ದೂರಿನಲ್ಲಿ ವಿವರಿಸಿದ್ದಾರೆ.</p>.<p>‘ರಾಜೀವ್ ಗಾಂಧಿ ಗ್ರಾಮೀಣ ವಿದ್ಯುತ್ ಯೋಜನೆಯಡಿ ನಾಲ್ಕು ಜಿಲ್ಲೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ಬೆಸ್ಕಾಂ ಮತ್ತು ಎಸ್ಪಿಎಂಲ್ ನಡುವೆ ತಕರಾರು ಉಂಟಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಮಧ್ಯಸ್ಥಿಕೆ ಕೇಂದ್ರವು (ಅರ್ಬಿಟ್ರಲ್ ಟ್ರಿಬ್ಯುನಲ್), ‘₹ 18.5 ಕೋಟಿಯನ್ನು ಗುತ್ತಿಗೆದಾರ ಸಂಸ್ಥೆಗೆ ನೀಡಬೇಕು’ ಎಂದು ಇದೇ ಮಾರ್ಚ್ನಲ್ಲಿ ಆದೇಶಿಸಿತು.’</p>.<p>‘ಈ ತೀರ್ಪಿನ ವಿರುದ್ಧ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 90 ದಿನಗಳ ಕಾಲವಕಾಶವನ್ನೂ ನೀಡಲಾಗಿತ್ತು. ಆದರೆ, ವಿನಾಯಕ್ ಆ ಕೆಲಸವನ್ನು ಸರಿಯಾಗಿ ಮಾಡಲಿಲ್ಲ. ಗುತ್ತಿಗೆದಾರರ ಪರವಾಗಿ ನಿಂತುಕೊಂಡಿದ್ದ ಅವರು, ಮುಂದಿನ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದರು.’</p>.<p>‘ಮೇಲ್ಮನವಿ ಸಲ್ಲಿಸುವುದಾಗಿ ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಂಡು ವಕಲತ್ತು ಸಹಿಯನ್ನೂ ಸಂಗ್ರಹಿಸಿದ್ದ ಅವರು, ಆ ಕಡತವನ್ನು ಉದ್ದೇಶಪೂರ್ವಕವಾಗಿ ತಮ್ಮ ಬಳಿಯೇ ಇಟ್ಟುಕೊಂಡರು. ಇದರಿಂದ ನಿಗದಿತ ಅವಧಿಯೊಳಗೆ ಮೇಲ್ಮನವಿ ಸಲ್ಲಿಸಲು ಆಗದೆ, ನಮ್ಮ ವಿರೋಧಿ ಗುತ್ತಿಗೆದಾರ ಕಂಪನಿಗೆ ₹ 18.5 ಕೋಟಿ ಪಾವತಿಸಬೇಕಾಯಿತು. ಹೀಗಾಗಿ, ಆರೋಪಿ ಸ್ಥಾನದಲ್ಲಿದ್ದ ಕಂಪನಿ ಜತೆ ಶಾಮೀಲಾಗಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ವಿನಾಯಕ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮಹೇಶ್ ದೂರಿನಲ್ಲಿ ಮನವಿ ಮಾಡಿದ್ದಾರೆ.</p>.<p><strong>ಸದ್ಯದಲ್ಲೇ ಹೊಸಬರ ನೇಮಕ</strong><br />‘ಮೇಲ್ಮನವಿ ಸಲ್ಲಿಸಲು ವಿಳಂಬ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಕಾನೂನು ತಜ್ಞರು ಸಲಹೆ ಕೊಟ್ಟಿದ್ದಾರೆ. ಹೀಗಾಗಿ ದೂರು ಕೊಟ್ಟಿದ್ದೇವೆ. ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಈಗ ನಿವೃತ್ತ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಮಹೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>