ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, ‘ಕೆ.ಆರ್. ಮಾರುಕಟ್ಟೆ ಸಹಿತ ನಗರದ ಎಲ್ಲ ಮಾರುಕಟ್ಟೆ ಸಂಕೀರ್ಣಗಳಲ್ಲಿರುವ ಅನಧಿಕೃತ ಮಳಿಗೆ ತೆರವುಗೊಳಿಸಬೇಕು.ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಶಿಫಾರಸು ಮಾಡಿರುವ 19 ಅಂಶಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು’ ಎಂದು ಆದೇಶಿಸಿತ್ತು. ಕೆ.ಆರ್.ಮಾರುಕಟ್ಟೆ ಸಂಕೀರ್ಣದ ಅಗ್ನಿ ಅವಘಡ ತುರ್ತು ನಿರ್ಗಮನದ ಸ್ಥಳ ಮತ್ತು ಸಾರ್ವಜನಿಕ ಪಡಸಾಲೆಯಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವಂತೆ ಕೋರಿ ಬೆಂಗಳೂರು ‘ಹೂ ವ್ಯಾಪಾರಿಗಳ ಸಂಘ’ ಈ ಅರ್ಜಿ ಸಲ್ಲಿಸಿದೆ. ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಲಾಗಿದೆ.