<p><strong>ಬೆಂಗಳೂರು:</strong> ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಮೃತಪಟ್ಟ ಮುಖ್ಯ ಎಂಜಿನಿಯರ್ ಸಿ.ಎಂ. ಶಿವಕುಮಾರ್ ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಅವರ ಕುಟುಂಬದವರಿಗೆ ಉದ್ಯೋಗ ನೀಡುವ ಪ್ರಸ್ತಾವಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ.</p>.<p>ಬೆಂಕಿ ಅವಘಡದಲ್ಲಿ ತೀವ್ರ ಗಾಯಗೊಂಡವರಿಗೂ ಪರಿಹಾರ ಧನವನ್ನು ಇಲಾಖೆಯ ಸಚಿವರ ಅನುಮೋದನೆಯೊಂದಿಗೆ ನಿರ್ಧರಿಸಲಾಗುತ್ತದೆ ಎಂದು ಎಂದು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ 2023ರ ಆಗಸ್ಟ್ 11ರಂದು ಬಿಟುಮಿನ್ ಪರೀಕ್ಷೆ ಮಾಡುವಾಗ, ಬೆಂಜೀನ್ ಹಾಕಿ, ಸ್ವಚ್ಛಗೊಳಿಸುವ ಸಂದರ್ಭದಲ್ಲಿ ರಾಸಾಯನಿಕ ಸೋರಿ ಬೆಂಕಿ ಕಾಣಿಸಿಕೊಂಡಿತ್ತು. ಅದು ಬೃಹತ್ ಪ್ರಮಾಣದಲ್ಲಿ ಹರಡಿಕೊಂಡಿದ್ದರಿಂದ ಒಂಬತ್ತು ಸಿಬ್ಬಂದಿಗೆ ಕೂಡಲೇ ಹೊರಬರಲು ಸಾಧ್ಯವಾಗಿರಲ್ಲ.</p>.<p>ಬೆಂಕಿ ಅವಘಡದಲ್ಲಿ ಶೇ 25ರಷ್ಟು ಗಾಯಗೊಂಡಿದ್ದ ಸಿ.ಎಂ. ಶಿವಕುಮಾರ್ (45) ಅವರು 20 ದಿನಗಳ ಬಳಿಕ ಆ.30ರಂದು ಅಪೊಲೊ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.</p>.ಪ್ರಯೋಗಾಲಯದಲ್ಲಿ ಬೆಂಕಿ ಅವಘಡ: ಬಿಬಿಎಂಪಿ ಕಟ್ಟಡಗಳ ಸಾಮರ್ಥ್ಯ ಪರಿಶೀಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಮೃತಪಟ್ಟ ಮುಖ್ಯ ಎಂಜಿನಿಯರ್ ಸಿ.ಎಂ. ಶಿವಕುಮಾರ್ ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಅವರ ಕುಟುಂಬದವರಿಗೆ ಉದ್ಯೋಗ ನೀಡುವ ಪ್ರಸ್ತಾವಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ.</p>.<p>ಬೆಂಕಿ ಅವಘಡದಲ್ಲಿ ತೀವ್ರ ಗಾಯಗೊಂಡವರಿಗೂ ಪರಿಹಾರ ಧನವನ್ನು ಇಲಾಖೆಯ ಸಚಿವರ ಅನುಮೋದನೆಯೊಂದಿಗೆ ನಿರ್ಧರಿಸಲಾಗುತ್ತದೆ ಎಂದು ಎಂದು ಸಚಿವ ಎಚ್.ಕೆ.ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ 2023ರ ಆಗಸ್ಟ್ 11ರಂದು ಬಿಟುಮಿನ್ ಪರೀಕ್ಷೆ ಮಾಡುವಾಗ, ಬೆಂಜೀನ್ ಹಾಕಿ, ಸ್ವಚ್ಛಗೊಳಿಸುವ ಸಂದರ್ಭದಲ್ಲಿ ರಾಸಾಯನಿಕ ಸೋರಿ ಬೆಂಕಿ ಕಾಣಿಸಿಕೊಂಡಿತ್ತು. ಅದು ಬೃಹತ್ ಪ್ರಮಾಣದಲ್ಲಿ ಹರಡಿಕೊಂಡಿದ್ದರಿಂದ ಒಂಬತ್ತು ಸಿಬ್ಬಂದಿಗೆ ಕೂಡಲೇ ಹೊರಬರಲು ಸಾಧ್ಯವಾಗಿರಲ್ಲ.</p>.<p>ಬೆಂಕಿ ಅವಘಡದಲ್ಲಿ ಶೇ 25ರಷ್ಟು ಗಾಯಗೊಂಡಿದ್ದ ಸಿ.ಎಂ. ಶಿವಕುಮಾರ್ (45) ಅವರು 20 ದಿನಗಳ ಬಳಿಕ ಆ.30ರಂದು ಅಪೊಲೊ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.</p>.ಪ್ರಯೋಗಾಲಯದಲ್ಲಿ ಬೆಂಕಿ ಅವಘಡ: ಬಿಬಿಎಂಪಿ ಕಟ್ಟಡಗಳ ಸಾಮರ್ಥ್ಯ ಪರಿಶೀಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>