ಬೆಂಗಳೂರು: ನಗರದ ಕುಮಾರಪಾರ್ಕ್ನಲ್ಲಿರುವಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ಸರ್ಕಾರಿ ವಸತಿ ಗೃಹದಲ್ಲಿ ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ಆಕಸ್ಮಿಕ ಸಂಭವಿಸಿಬಂಗಲೆಯ ವಿದ್ಯುತ್ ವೈರಿಂಗ್ ಮತ್ತು ಮರದ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.
ಭಾರಿ ಅಪಾಯದಿಂದ ಸಚಿವ ಈಶ್ವರಪ್ಪ ಹಾಗೂ ಅವರ ಪತ್ನಿ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.ಸಚಿವರು ಮಲಗುವ ಕೋಣೆಯ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಎಸಿ ಸ್ವಿಚ್ ಹಾಕಿದ ತಕ್ಷಣ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿತು.
ತಕ್ಷಣ ಅಳಿಯ ಸಂತೋಷ್ ಅವರಿಗೆ ಈಶ್ವರಪ್ಪ ವಿಷಯ ತಿಳಿಸಿದರು. ಸಂತೋಷ್ ಮಾಹಿತಿ ನೀಡುತ್ತಿದ್ದಂತೆಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.