ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಾರ್ಖಾನೆ

Last Updated 4 ಜನವರಿ 2022, 6:34 IST
ಅಕ್ಷರ ಗಾತ್ರ

ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿನ ಔಷಧ ತಯಾರಿಕಾ ಕಾರ್ಖಾನೆಯೊಂದು ಸೋಮವಾರ ಹೊತ್ತಿ ಉರಿದಿದೆ.

‘ಕಾರ್ಮಿಕರೆಲ್ಲಾ ಕೆಲಸ ಮುಗಿಸಿ ಮನೆಗೆ ಹೋಗಿದ್ದರು. ಮೂವರು ಮಾತ್ರ ಕಾರ್ಖಾನೆಯೊಳಗೆ ಇದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಅವರು ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಸಾವು–ನೋವು ಸಂಭವಿಸಿಲ್ಲ. ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ಇದೆ’‍ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿದ್ದ ಜ್ವಾಲೆ ಬಳಿಕ ಇಡೀ ಕಾರ್ಖಾನೆಗೆ ವ್ಯಾಪಿಸಿಕೊಂಡಿತ್ತು. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ರವಾನಿಸಿದ್ದಾರೆ. ಮೂರು ವಾಹನಗಳಲ್ಲಿ ಬಂದ ಸಿಬ್ಬಂದಿ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT