‘ಬಂದೋಬಸ್ತ್ಗಾಗಿ ಸ್ವಾತಂತ್ರ್ಯ ಉದ್ಯಾನದತ್ತ ಹೊರಟಿದ್ದ ಪಿಎಸ್ಐ ರವಿ, ಹೋಟೆಲ್ನ ಮಹಡಿಯಿಂದ ದಟ್ಟ ಹೊಗೆ ಹೊರಹೊಮ್ಮುತ್ತಿದ್ದುದನ್ನು ಗಮನಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಎರಡು ವಾಹನಗಳಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಸುಮಾರು 1 ಗಂಟೆ 30 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದ್ದಾರೆ.