ಬೊಮ್ಮಸಂದ್ರದಲ್ಲಿ ರೇಖಾ ಕೆಮಿಕಲ್ಸ್ ಆ್ಯಂಡ್ ಕಾರ್ಪೊರೇಷನ್ ಕಾರ್ಖಾನೆ ಇದೆ. ಸ್ಯಾನಿಟೈಸರ್ ಹಾಗೂ ಥಿನ್ನರ್ ತಯಾರಿಸಲಾಗುತ್ತದೆ. ಅದಕ್ಕೆ ಬೇಕಾದ ರಾಸಾಯನಿಕವನ್ನು ಬಾಪೂಜಿನಗರದ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು. ಅಲ್ಲಿಯೇ ಮಂಗಳವಾರ ಬೆಂಕಿ ಅವಘಡ ಸಂಭವಿಸಿ, ಗೋದಾಮು ಸುಟ್ಟಿದೆ. ಅಕ್ಕ-ಪಕ್ಕದ ಕಟ್ಟಡಗಳಿಗೂ ಹಾನಿ ಆಗಿದೆ.