ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿ ಕ್ಯಾಂಪಸ್‌ನಲ್ಲಿ ಭಾರಿ ಬೆಂಕಿ

Last Updated 14 ಮಾರ್ಚ್ 2020, 21:34 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಶನಿವಾರ ಕಾಣಿಸಿಕೊಂಡ ಭಾರಿ ಬೆಂಕಿಯಿಂದಾಗಿ ದಟ್ಟವಾಗಿ ಬೆಳೆದಿದ್ದ ಹಸಿರು ಸುಟ್ಟು ಬೂದಿಯಾಯಿತು.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾನೂನು ಕಾಲೇಜು ಬಳಿಯ ನೀಲಗಿರಿ ತೋಪಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ಕಿಡಿಗೇಡಿಗಳು ಬಿಸಾಡಿದ್ದ ಕಿಡಿಯಿಂದ ಬೆಂಕಿ ವ್ಯಾಪಿಸಿತು. ಒಣಗಿದ್ದ ಎಲೆಗಳು ಉರಿದವು. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಗಂಟೆ ಶ್ರಮಿಸಿದರು.

ಯಾವುದೇ ಅನಾಹುತ ಸಂಭವಿಸಿಲ್ಲ. ಬೇಸಿಗೆ ಸಮಯದಲ್ಲಿ ಬೆಂಕಿ ಸಾಮಾನ್ಯ. ಹೀಗಾಗಿ ಈ ಮರಗಳನ್ನು ತೆಗೆದು ಸ್ಥಳೀಯ ಜಾತಿ ಗಿಡಗಳ ನೆಡುವ ಉದ್ದೇಶವಿದೆ ಎಂದು ಕುಲಪತಿ ಕೆ.ಆರ್‌. ವೇಣುಗೋಪಾಲ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT