ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಶನಿವಾರ ಕಾಣಿಸಿಕೊಂಡ ಭಾರಿ ಬೆಂಕಿಯಿಂದಾಗಿ ದಟ್ಟವಾಗಿ ಬೆಳೆದಿದ್ದ ಹಸಿರು ಸುಟ್ಟು ಬೂದಿಯಾಯಿತು.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾನೂನು ಕಾಲೇಜು ಬಳಿಯ ನೀಲಗಿರಿ ತೋಪಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ಕಿಡಿಗೇಡಿಗಳು ಬಿಸಾಡಿದ್ದ ಕಿಡಿಯಿಂದ ಬೆಂಕಿ ವ್ಯಾಪಿಸಿತು. ಒಣಗಿದ್ದ ಎಲೆಗಳು ಉರಿದವು. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಗಂಟೆ ಶ್ರಮಿಸಿದರು.
ಯಾವುದೇ ಅನಾಹುತ ಸಂಭವಿಸಿಲ್ಲ. ಬೇಸಿಗೆ ಸಮಯದಲ್ಲಿ ಬೆಂಕಿ ಸಾಮಾನ್ಯ. ಹೀಗಾಗಿ ಈ ಮರಗಳನ್ನು ತೆಗೆದು ಸ್ಥಳೀಯ ಜಾತಿ ಗಿಡಗಳ ನೆಡುವ ಉದ್ದೇಶವಿದೆ ಎಂದು ಕುಲಪತಿ ಕೆ.ಆರ್. ವೇಣುಗೋಪಾಲ್ ತಿಳಿಸಿದರು.