ಬೆಂಗಳೂರು: ಮೆಟ್ರೊ ಕಾಮಗಾರಿಗೆ ಬೇಕಾಗುವ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದೆ.
‘ಲಕ್ಕಸಂದ್ರ ಬಳಿ ಗೋದಾಮು ಇದೆ. ರಾಸಾಯನಿಕ ವಸ್ತುಗಳು ಹಾಗೂ ಬಣ್ಣ ಬಳೆಯುವ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಅದೇ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು, ಹೊತ್ತಿ ಉರಿದಿದೆ’ ಎಂದು ಅಗ್ನಿಶಾಮಕ ದಳದ ಮೂಲಗಳು ಹೇಳಿವೆ.
‘ಗೋದಾಮಿನಲ್ಲಿ ಬೆಂಕಿಯ ಜ್ವಾಲೆ ಹೆಚ್ಚಾಗಿತ್ತು. ಐದು ವಾಹನಗಳ ಸಮೇತ ಸ್ಥಳಕ್ಕೆ ಹೋಗಿ ಬೆಂಕಿ ನಂದಿಸಲಾಗಿದೆ. ಹಾನಿ ಪ್ರಮಾಣ ಎಷ್ಟು ಎಂಬುದು ಗೊತ್ತಾಗಿಲ್ಲ. ಬೆಂಕಿ ಹೊತ್ತಿಕೊಳ್ಳಲು ಕಾರಣವೂ ತಿಳಿದುಬಂದಿಲ್ಲ’ ಎಂದೂ ಮೂಲಗಳು ತಿಳಿಸಿವೆ.