<p><strong>ಬೆಂಗಳೂರು</strong>: ಮೈಸೂರು ರಸ್ತೆಯ ಬಾಪೂಜಿನಗರದಲ್ಲಿರುವ ‘ರೇಖಾ ಕೆಮಿಕಲ್ಸ್ ಆ್ಯಂಡ್ ಅಸೋಸಿಯೇಷನ್’ ಕಾರ್ಖಾನೆ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ ಮಾಲೀಕರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.</p>.<p>ಅವಘಡ ಸಂಬಂಧ ಸ್ಫೋಟಕಗಳ ಕಾಯ್ದೆ ಅಡಿ ಬ್ಯಾಟರಾಯನಪುರ ಠಾಣೆಯಲ್ಲಿ ಈಗಾಗಲೇ ಒಂದು ಪ್ರಕರಣ ದಾಖಲಾಗಿದೆ. ಮಾಲೀಕರಾದ ಕಮಲಾ, ಅವರ ಪತಿ ಸಜ್ಜನ್ ರಾವ್ ಹಾಗೂ ಪುತ್ರ ಅನಿಲ್ ಎಂಬುವರನ್ನು ಬುಧವಾರವೇ ಬಂಧಿಸಲಾಗಿದೆ.</p>.<p>ಇದೀಗ ಟೆಂಪೊ ಚಾಲಕ ಶಂಭುಲಿಂಗ ಎಂಬುವರು ದೂರು ನೀಡಿದ್ದು, ಅದರನ್ವಯ ಮಾಲೀಕರ ವಿರುದ್ಧ ಪೊಲೀಸರು ಎರಡನೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ದೂರುದಾರರು ತಮ್ಮ ಟೆಂಪೊವನ್ನು ತೆಗೆದುಕೊಂಡು ಬಾಪೂಜಿನಗರಕ್ಕೆ ಬಂದಿದ್ದರು. ಕಾರ್ಖಾನೆ ಸಮೀಪದ ರಸ್ತೆ ಪಕ್ಕದಲ್ಲಿ ಟೆಂಪೊ ನಿಲ್ಲಿಸಿ ಟೀ ಕುಡಿಯಲು ಹೋಗಿದ್ದರು. ಅದೇ ವೇಳೆ ಬೆಂಕಿ ಅವಘಡ ಸಂಭವಿಸಿ, ಅವರ ಟೆಂಪೊ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಘಟನೆಯಲ್ಲಿ ಗೋದಾಮು ಸಂಪೂರ್ಣ ಸುಟ್ಟಿದ್ದು, ಗೋಡೆಗಳು ನೆಲಕ್ಕುರುಳಿವೆ. ಅಕ್ಕ–ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ವಾಹನಗಳು ಸುಟ್ಟಿವೆ. ಅವಘಡದಿಂದಾಗಿ ₹ 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ’ ಎಂದೂ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ರಸ್ತೆಯ ಬಾಪೂಜಿನಗರದಲ್ಲಿರುವ ‘ರೇಖಾ ಕೆಮಿಕಲ್ಸ್ ಆ್ಯಂಡ್ ಅಸೋಸಿಯೇಷನ್’ ಕಾರ್ಖಾನೆ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ ಮಾಲೀಕರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.</p>.<p>ಅವಘಡ ಸಂಬಂಧ ಸ್ಫೋಟಕಗಳ ಕಾಯ್ದೆ ಅಡಿ ಬ್ಯಾಟರಾಯನಪುರ ಠಾಣೆಯಲ್ಲಿ ಈಗಾಗಲೇ ಒಂದು ಪ್ರಕರಣ ದಾಖಲಾಗಿದೆ. ಮಾಲೀಕರಾದ ಕಮಲಾ, ಅವರ ಪತಿ ಸಜ್ಜನ್ ರಾವ್ ಹಾಗೂ ಪುತ್ರ ಅನಿಲ್ ಎಂಬುವರನ್ನು ಬುಧವಾರವೇ ಬಂಧಿಸಲಾಗಿದೆ.</p>.<p>ಇದೀಗ ಟೆಂಪೊ ಚಾಲಕ ಶಂಭುಲಿಂಗ ಎಂಬುವರು ದೂರು ನೀಡಿದ್ದು, ಅದರನ್ವಯ ಮಾಲೀಕರ ವಿರುದ್ಧ ಪೊಲೀಸರು ಎರಡನೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ದೂರುದಾರರು ತಮ್ಮ ಟೆಂಪೊವನ್ನು ತೆಗೆದುಕೊಂಡು ಬಾಪೂಜಿನಗರಕ್ಕೆ ಬಂದಿದ್ದರು. ಕಾರ್ಖಾನೆ ಸಮೀಪದ ರಸ್ತೆ ಪಕ್ಕದಲ್ಲಿ ಟೆಂಪೊ ನಿಲ್ಲಿಸಿ ಟೀ ಕುಡಿಯಲು ಹೋಗಿದ್ದರು. ಅದೇ ವೇಳೆ ಬೆಂಕಿ ಅವಘಡ ಸಂಭವಿಸಿ, ಅವರ ಟೆಂಪೊ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಘಟನೆಯಲ್ಲಿ ಗೋದಾಮು ಸಂಪೂರ್ಣ ಸುಟ್ಟಿದ್ದು, ಗೋಡೆಗಳು ನೆಲಕ್ಕುರುಳಿವೆ. ಅಕ್ಕ–ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ವಾಹನಗಳು ಸುಟ್ಟಿವೆ. ಅವಘಡದಿಂದಾಗಿ ₹ 50 ಲಕ್ಷಕ್ಕೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ’ ಎಂದೂ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>