<p><strong>ಬೆಂಗಳೂರು:</strong> ಮೈಸೂರು ರಸ್ತೆಯ ಬಾಪೂಜಿನಗರದಲ್ಲಿದ್ದ ರಾಸಾಯನಿಕ ಕಾರ್ಖಾನೆ ಗೋದಾಮಿನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕ ಬಿಜಯ್ (30) ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.</p>.<p>ಬ್ಯಾಟರಾಯಪುರ ಠಾಣೆ ವ್ಯಾಪ್ತಿಯಲ್ಲಿ ನ. 10ರಂದು ಅವಘಡ ಸಂಭವಿಸಿತ್ತು. ಗೋದಾಮು ಸಂಪೂರ್ಣವಾಗಿ ಸುಟ್ಟಿತ್ತು. ಅಕ್ಕ–ಪಕ್ಕದ ಕಟ್ಟಡಗಳಿಗೂ ಹಾನಿ ಆಗಿತ್ತು. 10ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿದ್ದವು.</p>.<p>ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಕ್ರಮವಾಗಿ ಗೋದಾಮು ಮಾಡಿದ್ದ ರೇಖಾ ಕೆಮಿಕಲ್ಸ್ ಆ್ಯಂಡ್ ಅಸೋಸಿಯೇಷನ್ ಮಾಲೀಕರಾದ ಕಮಲಾ, ಅವರ ಪತಿ ಸಜ್ಜನ್ ರಾವ್ ಹಾಗೂ ಪುತ್ರ ಅನಿಲ್ ಎಂಬುವರನ್ನು ಬಂಧಿಸಿದ್ದರು.</p>.<p>‘ಬಿಹಾರದ ಬಿಜಯ್, ಗೋದಾಮಿನಲ್ಲಿ ಕೆಲಸಕ್ಕೆ ಬಂದಿದ್ದ. ಟಿಪ್ಪರ್ನಲ್ಲಿ ತಂದಿದ್ದ ರಾಸಾಯನಿಕಗಳ ಡಬ್ಬಿಗಳೇ ಸ್ಫೋಟಕ್ಕೆ ಕಾರಣ. ಆ ರಾಸಾಯನಿಕಗಳನ್ನು ಟಿಪ್ಪರ್ನಿಂದ ಇಳಿಸಿ ಬ್ಯಾರಲ್ಗಳಿಗೆ ತುಂಬುವಂತೆ ಮಾಲೀಕರು ಹೇಳಿದ್ದರು.<br />ಅದರಂತೆ ಬಿಜಯ್, ಆ ಕೆಲಸದಲ್ಲಿ ನಿರತರಾಗಿದ್ದರು. ಅದೇ ವೇಳೆಯೇ ಗೋದಾಮಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಕ್ಷಣಮಾತ್ರದಲ್ಲಿ ಇಡೀ ಗೋದಾಮು ಆವರಿಸಿತ್ತು. ಬಿಜಯ್ ಸಹ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ದೇಹದ ಶೇ 50ಕ್ಕೂ ಹೆಚ್ಚು ಭಾಗ ಸುಟ್ಟಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಬೆಳಿಗ್ಗೆ ತೀರಿಕೊಂಡಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೈಸೂರು ರಸ್ತೆಯ ಬಾಪೂಜಿನಗರದಲ್ಲಿದ್ದ ರಾಸಾಯನಿಕ ಕಾರ್ಖಾನೆ ಗೋದಾಮಿನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕ ಬಿಜಯ್ (30) ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.</p>.<p>ಬ್ಯಾಟರಾಯಪುರ ಠಾಣೆ ವ್ಯಾಪ್ತಿಯಲ್ಲಿ ನ. 10ರಂದು ಅವಘಡ ಸಂಭವಿಸಿತ್ತು. ಗೋದಾಮು ಸಂಪೂರ್ಣವಾಗಿ ಸುಟ್ಟಿತ್ತು. ಅಕ್ಕ–ಪಕ್ಕದ ಕಟ್ಟಡಗಳಿಗೂ ಹಾನಿ ಆಗಿತ್ತು. 10ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿದ್ದವು.</p>.<p>ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಅಕ್ರಮವಾಗಿ ಗೋದಾಮು ಮಾಡಿದ್ದ ರೇಖಾ ಕೆಮಿಕಲ್ಸ್ ಆ್ಯಂಡ್ ಅಸೋಸಿಯೇಷನ್ ಮಾಲೀಕರಾದ ಕಮಲಾ, ಅವರ ಪತಿ ಸಜ್ಜನ್ ರಾವ್ ಹಾಗೂ ಪುತ್ರ ಅನಿಲ್ ಎಂಬುವರನ್ನು ಬಂಧಿಸಿದ್ದರು.</p>.<p>‘ಬಿಹಾರದ ಬಿಜಯ್, ಗೋದಾಮಿನಲ್ಲಿ ಕೆಲಸಕ್ಕೆ ಬಂದಿದ್ದ. ಟಿಪ್ಪರ್ನಲ್ಲಿ ತಂದಿದ್ದ ರಾಸಾಯನಿಕಗಳ ಡಬ್ಬಿಗಳೇ ಸ್ಫೋಟಕ್ಕೆ ಕಾರಣ. ಆ ರಾಸಾಯನಿಕಗಳನ್ನು ಟಿಪ್ಪರ್ನಿಂದ ಇಳಿಸಿ ಬ್ಯಾರಲ್ಗಳಿಗೆ ತುಂಬುವಂತೆ ಮಾಲೀಕರು ಹೇಳಿದ್ದರು.<br />ಅದರಂತೆ ಬಿಜಯ್, ಆ ಕೆಲಸದಲ್ಲಿ ನಿರತರಾಗಿದ್ದರು. ಅದೇ ವೇಳೆಯೇ ಗೋದಾಮಿನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ, ಕ್ಷಣಮಾತ್ರದಲ್ಲಿ ಇಡೀ ಗೋದಾಮು ಆವರಿಸಿತ್ತು. ಬಿಜಯ್ ಸಹ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ದೇಹದ ಶೇ 50ಕ್ಕೂ ಹೆಚ್ಚು ಭಾಗ ಸುಟ್ಟಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶನಿವಾರ ಬೆಳಿಗ್ಗೆ ತೀರಿಕೊಂಡಿದ್ದಾರೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>