<p><strong>ಬೆಂಗಳೂರು: </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸಬೇಕಿದ್ದ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು.</p>.<p>‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಶುಕ್ರವಾರ ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಕಾಲೇಜು ಬಳಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಬೀದಿ ದೀಪದ ತಂತಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.<br />ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p class="Subhead">ಕಮಿಷನರ್ ಭೇಟಿ: ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಸ್ಕಾಂ ಅಧಿಕಾರಿಗಳು ಬೀದಿ ದೀಪಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲೇ ಬೀದಿದೀಪ ಸಮಸ್ಯೆಯಿಂದಾಗಿ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ’ ಎಂದು ಹೇಳಿದರು.</p>.<p>‘ಕಾಲೇಜು ಬಳಿ ಜೋರು ಶಬ್ದ ಕೇಳಿಸಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಆ ಬಗ್ಗೆಯೂ ಪರಿಶೀಲಿಸಲಾಗಿದ್ದು, ಜನರು ಆತಂಕಪಡುವ ಅವಶ್ಯಕತೆ ಇಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸಬೇಕಿದ್ದ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು.</p>.<p>‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಶುಕ್ರವಾರ ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಕಾಲೇಜು ಬಳಿ ವಿದ್ಯುತ್ ಶಾರ್ಟ್ ಸರ್ಕೀಟ್ನಿಂದ ಬೀದಿ ದೀಪದ ತಂತಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.<br />ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p class="Subhead">ಕಮಿಷನರ್ ಭೇಟಿ: ಬೆಂಕಿ ಕಾಣಿಸಿಕೊಂಡ ಸ್ಥಳಕ್ಕೆ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಸ್ಕಾಂ ಅಧಿಕಾರಿಗಳು ಬೀದಿ ದೀಪಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲೇ ಬೀದಿದೀಪ ಸಮಸ್ಯೆಯಿಂದಾಗಿ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿದೆ’ ಎಂದು ಹೇಳಿದರು.</p>.<p>‘ಕಾಲೇಜು ಬಳಿ ಜೋರು ಶಬ್ದ ಕೇಳಿಸಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಆ ಬಗ್ಗೆಯೂ ಪರಿಶೀಲಿಸಲಾಗಿದ್ದು, ಜನರು ಆತಂಕಪಡುವ ಅವಶ್ಯಕತೆ ಇಲ್ಲ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>