ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಮನೆ, ಬೈಕ್‌ಗೆ ಬೆಂಕಿ

Last Updated 13 ಜನವರಿ 2020, 20:18 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲಗುಂಟೆ ಬಳಿಯ ಶೆಟ್ಟಿಹಳ್ಳಿಯಲ್ಲಿರುವ ದಾಸರಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನರಸಿಂಹಮೂರ್ತಿ ಅವರ ಮನೆ ಮತ್ತು ಬೈಕ್‌ಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ದುಷ್ಕರ್ಮಿಗಳ ಕೃತ್ಯದಿಂದ ಬೈಕ್ ಸುಟ್ಟು ಕರಕಲಾದರೆ, ಮನೆಯ ಕಿಟಿಕಿ, ಬಾಗಿಲಿಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಪಾರಾಗಿದ್ದಾರೆ.

ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಮತ್ತು ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನರಸಿಂಹಮೂರ್ತಿ ಅವರ ಮಗಳಿಗೆ ಬೆದರಿಕೆ ಹಾಕುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

‘ಸ್ಥಳದಲ್ಲಿ ಪತ್ರವೊಂದು ಸಿಕ್ಕಿದೆ. ಅದರಲ್ಲಿ ನರಸಿಂಹಮೂರ್ತಿ ಮಗಳಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಆ ಪತ್ರದ ಆಧಾರದಲ್ಲಿ ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT