ಕೋವಿಡ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಕರೊನಾ ಸೋಂಕು ಪರೀಕ್ಷೆ ಕಡ್ಡಾಯವಾಗಿದೆ. ಹಾಗಾಗಿ ಬಾಲಕಿಯ ಗಂಟಲು ದ್ರವ ಮಾದರಿ ತೆಗೆದು ಆರ್ ಟಿಪಿಸಿಆರ್ ಪರೀಕ್ಷೆಗೆ ಕಳಿಸಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ವೈದ್ಯರು ತಿಳಿಸಿದ್ದಾರೆ. ತಡರಾತ್ರಿ ಪಟಾಕಿ ಹಾನಿಗೊಳಗಾಗಿ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು, ನಾರಾಯಣ ನೇತ್ರಾಲಯದಲ್ಲಿ 40 ವರ್ಷದ ಮಹಿಳೆ ಚಿಕಿತ್ಸೆ ಪಡೆದಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಸೋಮವಾರ ಮೂರು, ಶಂಕರದಲ್ಲಿ 14, ನಾರಾಯಣ ನೇತ್ರಾಲಯದಲ್ಲಿ 6, ನೇತ್ರಧಾಮದಲ್ಲಿ 3 ಹಾಗೂ ಶೇಖರ ಆಸ್ಪತ್ರೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ.