‘ಈ ಹಿಂದೆ ಪೀಣ್ಯ ಅಗ್ನಿಶಾಮಕ ದಳದಲ್ಲಿ ಕೆಲಸ ಮಾಡುತ್ತಿದ್ದ ಆನಂದ್, ಅಧಿಕಾರಿಗಳ ಹೆಸರಿನಲ್ಲಿ ಹಣ ಸುಲಿಗೆ ಮಾಡುತ್ತಿದ್ದ. ಇದೇ ಪ್ರಕರಣದಲ್ಲಿ ಈತನನ್ನು ಅಮಾನತು ಮಾಡಲಾಗಿತ್ತು. ನಿಗದಿತ ಕಾಲಾವಧಿ ಬಳಿಕ ಅಮಾನತು ಹಿಂಪಡೆದು, ಅಥಣಿ ಠಾಣೆಗೆ ನಿಯೋಜಿಸಲಾಗಿತ್ತು. ಆಗಾಗ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ’ ಎಂದೂ ತಿಳಿಸಿದರು.