ಕೊಲೆ, ಕೊಲೆಯತ್ನ ಸೇರಿದಂತೆ 14 ಕ್ರಿಮಿನಲ್ ಪ್ರಕರಣಗಳಲ್ಲಿಭಾಗಿಯಾಗಿ ಗುಂಡ ಆರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ. ತುಮಕೂರಿನ ಜಯನಗರ ಠಾಣೆಯ ರೌಡಿಪಟ್ಟಿಯಲ್ಲಿ ಈತನ ಹೆಸರಿದೆ. ಆರೋಪಿಯು ಬೆಂಗಳೂರಿನ ಸೋಲದೇವನಹಳ್ಳಿ, ಮಲ್ಲಸಂದ್ರದಲ್ಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಆ ಮಾಹಿತಿ ಆಧರಿಸಿ ಪಾರ್ವತಮ್ಮ ನೇತೃತ್ವದಲ್ಲಿ ತಿಲಕ್ ಪಾರ್ಕ್ ಪೊಲೀಸರ ತಂಡ ನಗರಕ್ಕೆ ಬಂದಿತ್ತು.