<p><strong>ಬೆಂಗಳೂರು:</strong> ತನ್ನನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿ ಸ್ಟೀಫನ್ ಫರ್ನಾಂಡಿಸ್ ಅಲಿಯಾಸ್ ಗುಂಡ ಎಂಬಾತನ ಕಾಲಿಗೆ ಗುಂಡು ಹೊಡೆದು ತುಮಕೂರಿನ ತಿಲಕ್ ಪಾರ್ಕ್ ಸರ್ಕಲ್ ಇನ್ಸ್ಪೆಕ್ಟರ್ ಪಾರ್ವತಮ್ಮ ಬಂಧಿಸಿದ್ದಾರೆ.</p>.<p>ಕೊಲೆ, ಕೊಲೆಯತ್ನ ಸೇರಿದಂತೆ 14 ಕ್ರಿಮಿನಲ್ ಪ್ರಕರಣಗಳಲ್ಲಿಭಾಗಿಯಾಗಿ ಗುಂಡ ಆರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ. ತುಮಕೂರಿನ ಜಯನಗರ ಠಾಣೆಯ ರೌಡಿಪಟ್ಟಿಯಲ್ಲಿ ಈತನ ಹೆಸರಿದೆ. ಆರೋಪಿಯು ಬೆಂಗಳೂರಿನ ಸೋಲದೇವನಹಳ್ಳಿ, ಮಲ್ಲಸಂದ್ರದಲ್ಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಆ ಮಾಹಿತಿ ಆಧರಿಸಿ ಪಾರ್ವತಮ್ಮ ನೇತೃತ್ವದಲ್ಲಿ ತಿಲಕ್ ಪಾರ್ಕ್ ಪೊಲೀಸರ ತಂಡ ನಗರಕ್ಕೆ ಬಂದಿತ್ತು.</p>.<p>2017ರಲ್ಲಿ ತುಮಕೂರಿನಲ್ಲಿ ಮಂಜ ಎಂಬಾತನ ಕೊಲೆಯ ಬಳಿಕ ಕೊಲೆಯತ್ನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಗುಂಡ ಭಾಗಿಯಾಗಿದ್ದ. ಜೈಲಿಗೂ ಹೋಗಿದ್ದ ಈತ, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಆತನ ಬಂಧನಕ್ಕೆ ವಾರೆಂಟ್ ಜಾರಿಯಾಗಿತ್ತು.</p>.<p>ಸೋಲದೇವನಹಳ್ಳಿ ಇನ್ಸ್ಪೆಕ್ಟರ್ ಶಿವಸ್ವಾಮಿ ಜೊತೆ ಪಾರ್ವತಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಶುಕ್ರವಾರ ಸಂಜೆ ಆರೋಪಿಯ ಬಂಧನಕ್ಕೆ ಮಲ್ಲಸಂದ್ರಕ್ಕೆ ತೆರಳಿತ್ತು. ಬಂಧಿಸಲು ಮುಂದಾದ ಕಾನ್ಸ್ಟೆಬಲ್ ಶ್ರೀನಿವಾಸ್ ಮತ್ತು ಮಂಜುನಾಥ ಎಂಬುವರಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಗುಂಡ ಯತ್ನಿಸಿದ್ದ.</p>.<p>ತಕ್ಷಣ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಆತನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಹಲ್ಲೆ ಮಾಡಲು ಮುಂದಾದಾಗ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು. ಆರೋಪಿ ಮತ್ತು ಗಾಯಾಳು ಪೊಲೀಸರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತನ್ನನ್ನು ಬಂಧಿಸಲು ಮುಂದಾದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿ ಸ್ಟೀಫನ್ ಫರ್ನಾಂಡಿಸ್ ಅಲಿಯಾಸ್ ಗುಂಡ ಎಂಬಾತನ ಕಾಲಿಗೆ ಗುಂಡು ಹೊಡೆದು ತುಮಕೂರಿನ ತಿಲಕ್ ಪಾರ್ಕ್ ಸರ್ಕಲ್ ಇನ್ಸ್ಪೆಕ್ಟರ್ ಪಾರ್ವತಮ್ಮ ಬಂಧಿಸಿದ್ದಾರೆ.</p>.<p>ಕೊಲೆ, ಕೊಲೆಯತ್ನ ಸೇರಿದಂತೆ 14 ಕ್ರಿಮಿನಲ್ ಪ್ರಕರಣಗಳಲ್ಲಿಭಾಗಿಯಾಗಿ ಗುಂಡ ಆರು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ. ತುಮಕೂರಿನ ಜಯನಗರ ಠಾಣೆಯ ರೌಡಿಪಟ್ಟಿಯಲ್ಲಿ ಈತನ ಹೆಸರಿದೆ. ಆರೋಪಿಯು ಬೆಂಗಳೂರಿನ ಸೋಲದೇವನಹಳ್ಳಿ, ಮಲ್ಲಸಂದ್ರದಲ್ಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಆ ಮಾಹಿತಿ ಆಧರಿಸಿ ಪಾರ್ವತಮ್ಮ ನೇತೃತ್ವದಲ್ಲಿ ತಿಲಕ್ ಪಾರ್ಕ್ ಪೊಲೀಸರ ತಂಡ ನಗರಕ್ಕೆ ಬಂದಿತ್ತು.</p>.<p>2017ರಲ್ಲಿ ತುಮಕೂರಿನಲ್ಲಿ ಮಂಜ ಎಂಬಾತನ ಕೊಲೆಯ ಬಳಿಕ ಕೊಲೆಯತ್ನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಗುಂಡ ಭಾಗಿಯಾಗಿದ್ದ. ಜೈಲಿಗೂ ಹೋಗಿದ್ದ ಈತ, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಆತನ ಬಂಧನಕ್ಕೆ ವಾರೆಂಟ್ ಜಾರಿಯಾಗಿತ್ತು.</p>.<p>ಸೋಲದೇವನಹಳ್ಳಿ ಇನ್ಸ್ಪೆಕ್ಟರ್ ಶಿವಸ್ವಾಮಿ ಜೊತೆ ಪಾರ್ವತಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಶುಕ್ರವಾರ ಸಂಜೆ ಆರೋಪಿಯ ಬಂಧನಕ್ಕೆ ಮಲ್ಲಸಂದ್ರಕ್ಕೆ ತೆರಳಿತ್ತು. ಬಂಧಿಸಲು ಮುಂದಾದ ಕಾನ್ಸ್ಟೆಬಲ್ ಶ್ರೀನಿವಾಸ್ ಮತ್ತು ಮಂಜುನಾಥ ಎಂಬುವರಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಗುಂಡ ಯತ್ನಿಸಿದ್ದ.</p>.<p>ತಕ್ಷಣ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಆತನಿಗೆ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೆ ಹಲ್ಲೆ ಮಾಡಲು ಮುಂದಾದಾಗ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಲಾಯಿತು. ಆರೋಪಿ ಮತ್ತು ಗಾಯಾಳು ಪೊಲೀಸರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>