ಬೆಂಗಳೂರು: ಬ್ಯಾಂಕ್ ಹಣ ವಸೂಲಿಗೆ ಹೋಗಿದ್ದ ಅಬ್ದುಲ್ ಸಮದ್ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಹಣ ವಸೂಲಿ ಮಾಡಲು ಹೋಗಿದ್ದಾಗ ಬಾಣಸವಾಡಿ ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ಈ ನಡೆದ ಘಟನೆ ನಡೆದಿದೆ.
ಅಬ್ದುಲ್ ಸಮದ್ ಅವರಎದೆ ಭಾಗಕ್ಕೆ ಗುಂಡು ತಗುಲಿದೆ.ಸಮದ್ನಸಹೋದರ ಸೈಯದ್, ಎಚ್ಡಿಎಫ್ಸಿ ಬ್ಯಾಂಕ್ ಹಣ ವಸೂಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ₹20 ಲಕ್ಷ ವಾಹನ ಸಾಲ ವಸೂಲಿ ಮಾಡಲು ಸಮದ್ ಸಹೋದರನ ಜೊತೆ ಹೋಗಿದ್ದರು.
ಮಾತಿಗೆ ಮಾತು ಬೆಳೆದು ಸಾಲಗಾರನೇ ಗನ್ ನಿಂದು ಶೂಟ್ ಮಾಡಿದ್ದಾನೆ ಎನ್ನಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.