ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಹಣ ವಸೂಲಿಗೆ ತೆರಳಿದವರ ಮೇಲೆ ಗುಂಡಿನ ದಾಳಿ

Last Updated 30 ಜನವರಿ 2020, 6:19 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕ್ ಹಣ ವಸೂಲಿಗೆ ಹೋಗಿದ್ದ ಅಬ್ದುಲ್ ಸಮದ್ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ‌.

ಹಣ ವಸೂಲಿ ಮಾಡಲು ಹೋಗಿದ್ದಾಗ ಬಾಣಸವಾಡಿ ಬಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಈ ನಡೆದ ಘಟನೆ ನಡೆದಿದೆ.

ಅಬ್ದುಲ್ ಸಮದ್‌ ಅವರಎದೆ ಭಾಗಕ್ಕೆ ಗುಂಡು ತಗುಲಿದೆ.ಸಮದ್‌ನಸಹೋದರ ಸೈಯದ್, ಎಚ್‌ಡಿಎಫ್‌ಸಿ ಬ್ಯಾಂಕ್ ಹಣ ವಸೂಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ₹20 ಲಕ್ಷ ವಾಹನ ಸಾಲ ವಸೂಲಿ ಮಾಡಲು ಸಮದ್ ಸಹೋದರನ ಜೊತೆ ಹೋಗಿದ್ದರು.

ಮಾತಿಗೆ ಮಾತು ಬೆಳೆದು ಸಾಲಗಾರನೇ ಗನ್ ನಿಂದು ಶೂಟ್ ಮಾಡಿದ್ದಾನೆ ಎನ್ನಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT