‘ಎಂ.ಎಸ್.ಪಾಳ್ಯ ಜಂಕ್ಷನ್ ಬಳಿ ಆರೋಪಿ ಬೈಕ್ನಲ್ಲಿ ಹೊರಟಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಇನ್ಸ್ಪೆಕ್ಟರ್ ಅರುಣ್ಕುಮಾರ್ ನೇತೃತ್ವದ ತಂಡ ಸ್ಥಳಕ್ಕೆ ಹೋಗಿತ್ತು. ಪೊಲೀಸರನ್ನು ನೋಡುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದ ಆರೋಪಿ, ವೇಗವಾಗಿ ಬೈಕ್ ಚಲಾಯಿಸಿದ್ದ. ನಿಯಂತ್ರಣ ಕಳೆದುಕೊಂಡು ಕಳತೂರು ಫಾರಂ ಬಳಿ ಬೈಕ್ ಉರುಳಿಬಿದ್ದಿತ್ತು. ಹಿಡಿಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ. ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್, ಆತನ ಕಾಲಿಗೆ ಗುಂಡು ಹೊಡೆದರು’ ಎಂದೂ ಮೂಲಗಳು ತಿಳಿಸಿವೆ.