‘1905ರಷ್ಟರಲ್ಲಿ ನಗರದಲ್ಲಿ ಚಾಮರಾಜಪೇಟೆ, ಮಲ್ಲೇಶ್ವರ ಮುಂತಾದ ಬಡಾವಣೆಗಳು ವ್ಯವಸ್ಥಿತವಾಗಿ ಬೆಳವಣಿಗೆ ಹೊಂದಿದ್ದವು.ನಗರಕ್ಕೆ ಶಿವನಸಮುದ್ರದಿಂದಲೇ ವಿದ್ಯುತ್ ಪೂರೈಸಲಾಗಿತ್ತು. ಇದೇ ಸಂದರ್ಭದಲ್ಲಿ 100 ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಆ ಮನೆಗಳಿಂದ ತಿಂಗಳಿಗೆ ₹1ರಂತೆ ವಿದ್ಯುತ್ ಶುಲ್ಕ ವಸೂಲಿ ಮಾಡಲಾಗುತ್ತಿತ್ತು. ನಗರಕ್ಕೆ ವಿದ್ಯುತ್ ಪೂರೈಸುವಲ್ಲಿ ಮೈಸೂರು ಸಂಸ್ಥಾನದ ಆಗಿನ ದಿವಾನರಾಗಿದ್ದ ಶೇಷಾದ್ರಿ ಅಯ್ಯರ್ ದೂರದೃಷ್ಟಿಯೂ ಇದೆ’ ಎಂದು ಧರ್ಮೇಂದ್ರ ವಿವರಿಸಿದರು.