ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲೇ‌ ಮೊದಲು: ಶ್ವಾನ ಪಡೆಯ ಚಟುವಟಿಕೆ ಉದ್ಯಾನ

Last Updated 26 ಮೇ 2020, 10:16 IST
ಅಕ್ಷರ ಗಾತ್ರ

ಬೆಂಗಳೂರು: ಅಪರಾಧ ಪ್ರಕರಣ ಪತ್ತೆ, ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಗಾಗಿ ಶ್ವಾನ ದಳವನ್ನು ಮತ್ತಷ್ಟು ಚುರುಕುಗೊಳಿಸಲಾಗಿದ್ದು, ಇದೀಗ ಶ್ವಾನ ದಳದ ಚಟುವಟಿಕೆಗಳಿಗೆಂದೇ ಆಧುನಿಕ ಉದ್ಯಾನ ನಿರ್ಮಿಸಲಾಗಿದೆ.

ಬೆಂಗಳೂರಿನ ಆಡುಗೋಡಿ ಸಿಎಆರ್ ಮೈದಾನದಲ್ಲಿ ಈ ಉದ್ಯಾನ ಇದೆ. ಮೊದಲಿದ್ದ ಉದ್ಯಾನವನ್ನೇ ಉನ್ನತೀಕರಿಸಿ ಹೊಸದಾದ ಉದ್ಯಾನ ನಿರ್ಮಿಸಲಾಗಿದೆ.

ಮಂಗಳವಾರ ಉದ್ಯಾನ ಉದ್ಘಾಟಿಸಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, 'ಪೊಲೀಸ್‌ ಶ್ವಾನದಳವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 2.5 ಕೋಟಿ ವೆಚ್ಚದಲ್ಲಿ 50 ಶ್ವಾನಗಳನ್ನು ಅಳವಡಿಸಿಕೊಳ್ಳಲಾಗುವುದು' ಎಂದರು.

'ಸ್ಪೋಟಕ ವಸ್ತುಗಳನ್ನು, ಡ್ರಗ್ಸ್‌ಗಳನ್ನು ಪತ್ತೆಹಚ್ಚುವ ಹಾಗೂ ಅಪರಾಧ ಸ್ಥಳದಲ್ಲಿ ಅಪರಾಧಿಯನ್ನು ಪತ್ತೆಹಚ್ಚುವಲ್ಲಿ ನಮ್ಮ ಇಲಾಖೆಯ ಶ್ವಾನಗಳು ಬಹಳ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ತಂಡವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವುಗಳಿಗೆ ಅತ್ಯುತ್ತಮ ತರಬೇತಿ ನೀಡುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಿಎಆರ್‌ (ದಕ್ಷಿಣ) ನಲ್ಲಿ ಡಿಸಿಪಿ ಯೋಗೇಶ್‌ ಹಾಗೂ ಎಸಿಪಿ ನಿಂಗಾರೆಡ್ಡಿ ಪಾಟೀಲ್‌ ಅವರ ನೇತೃತ್ವದಲ್ಲಿ ಶ್ವಾನ ಚಟುವಟಿಕೆಯ ಉದ್ಯಾನವನ್ನು ಉನ್ನತೀಕರಿಸಲಾಗಿದೆ' ಎಂದರು.

'ಶ್ವಾನ ಗುರು ಎಂದೇ ಪ್ರಸಿದ್ದಿಯಾಗಿರುವ ಶ್ವಾನಗಳ ಮನೋ ವೈದ್ಯ ಅಮೃತ್‌ ಹಿರಣ್ಯ ಅವರು ಉದ್ಯಾನ ನಿರ್ಮಾಣಕ್ಕೆ ಸಲಹೆಗಳನ್ನು ನೀಡಿದ್ದಾರೆ. ಈ ಚಟುವಟಿಕೆಯ ಉದ್ಯಾನವನ್ನು ನಮ್ಮ ಸಿಬ್ಬಂದಿಗಳೇ ಶ್ರದ್ದೆಯಿಂದ ನಿರ್ಮಿಸಿದ್ದಾರೆ. ಈ ಶ್ವಾನದಳಕ್ಕೆ ಇನ್ನೂ ಹೆಚ್ಚಿನ ಶ್ವಾನಗಳನ್ನು ಸೇರಿಸುವ ಉದ್ದೇಶದಿಂದ ರಾಜ್ಯ ಸರಕಾರ 2.5 ಕೋಟಿ ರೂಪಾಯಿಗಳ ಅನುದಾನವನ್ನು ನೀಡಿದೆ. ಬೆಂಗಳೂರು ಸಿಎಆರ್ ಉತ್ತರದಲ್ಲೂ ಶ್ವಾನ ತರಬೇತಿ ಕೇಂದ್ರವನ್ನು ತೆರೆಯಲು ಉದ್ದೇಶಿಸಲಾಗಿದೆ. ಮುಂದಿನ ದಿನದಲ್ಲಿ ಪೊಲೀಸ್‌ ಇಲಾಖೆಯ ಮಹಿಳಾ ಕಾನ್ಸ್‌ಟೇಬಲ್‌ಗಳನ್ನು ಡಾಗ್‌ ಹ್ಯಾಂಡ್ಲರ್‌ಗಳಾಗಿ ನೇಮಿಸಲು ಚಿಂತನೆ ನಡೆಯುತ್ತಿದೆ' ಎಂದರು.

ಉದ್ಯಾನ ಉದ್ಘಾಟನೆ ಬಳಿಕ ಅಮೃತ್‌ ಹಿರಣ್ಯ ಅವರ ತರಬೇತಿಯಂತೆ ಶ್ವಾನಗಳ ಪರೇಡ್ ನಡೆಯಿತು. ವಾಹನಗಳ‌ ಬೆನ್ನಟ್ಟುವುದು, ಸ್ಫೋಟಕ ಹಾಗೂ ಡಗ್ರ ಪತ್ತೆ, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಹಾಗೂ ಹಲವು ರೀತಿಯ ಕಾರ್ಯಾಚರಣೆಯನ್ನು ಶ್ವಾನಪಡೆ ಪ್ರದರ್ಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT