<p><strong>ಬೆಂಗಳೂರು:</strong> ‘ಪಕ್ಷದ ಶಿಸ್ತು ಪಾಲನೆ ಮಾಡುವವರಿಗೆ ಮೊದಲ ಆದ್ಯತೆ ನೀಡಿ, ಪಕ್ಷ ನಿಷ್ಠೆ ತೋರುವವರಿಗೆ ಸೂಕ್ತ ಸ್ಥಾನ<br />ಮಾನ ನೀಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಕೆಪಿಸಿಸಿ ಕಚೇರಿಗೆ ಸೋಮವಾರ ಭೇಟಿ ನೀಡಿದ ಅವರು ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮವರ ಜತೆ ಮಾತನಾಡಿದರು.</p>.<p>‘ನಾವು ಜಾತಿ ಆಧಾರದ ಮೇಲೆ ಕೆಲಸ ಮಾಡುವುದಿಲ್ಲ. ಎಲ್ಲ ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುವ ಯತ್ನ ಮಾಡುತ್ತೇವೆ. ನಮಗೆ ಸಂಖ್ಯಾಬಲಕ್ಕಿಂತ ಗುಣಬಲ ಇರುವ ನಾಯಕರು ಬೇಕಾಗಿದೆ ಎಂದು ಹೇಳಿದರು.</p>.<p>‘ನಮ್ಮ ನಾಲ್ವರ ಮೇಲೆ ವಿಶ್ವಾಸ ಇಟ್ಟಿರುವ ಹೈಕಮಾಂಡ್ ಈ ಸ್ಥಾನ ನೀಡಿದೆ. ಇದು ಹೊಸ ತಂಡಕ್ಕೆ ನೀಡಿದ ಅಧಿಕಾರವಲ್ಲ.. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ತಳಮಟ್ಟದಿಂದ ಪಕ್ಷ ಕಟ್ಟಲು ನಾವು ಇಂದು ನಿರ್ಧಾರ ಮಾಡಿದ್ದೇವೆ. ’ ಎಂದು ಹೇಳಿದರು.</p>.<p>‘ದೇಶದ ಎಲ್ಲ ಕಡೆಗಳಲ್ಲಿ ಅಧಿಕಾರ ಸಿಕ್ಕಿದರೂ ಬಿಜೆಪಿ ನಾಯಕರಿಗೆ ತೃಪ್ತಿಯಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿರುವ ಕಡೆಗಳಲ್ಲಿ ನಮ್ಮ ನಾಯಕರನ್ನು ಸೆಳೆದುಕೊಳ್ಳುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ನಮ್ಮ ನಾಯಕರು, ಕಾರ್ಯಕರ್ತರು ನಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ’ ಎಂದು ವಿವರಿಸಿದರು.</p>.<p class="Subhead"><strong>ಭಿನ್ನಾಭಿಪ್ರಾಯ ಇಲ್ಲ:</strong>‘ನನ್ನನ್ನು ಪಕ್ಷದ ಅಧ್ಯಕ್ಷರಾಗಿ ನೇಮಿಸಬೇಕು ಎಂದು ಎಂ.ಬಿ. ಪಾಟೀಲರು ಸೇರಿ ಎಲ್ಲ ನಾಯಕರು ಸೂಚಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ’ ಎಂದರು.</p>.<p>ಪಾಟೀಲರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮಲ್ಲಿ ಯಾವುದೇ ವ್ಯಕ್ತಿಗತ ವಿಚಾರವಿಲ್ಲ. ಸಿದ್ಧಾಂತದ ಆಧಾರದ ಮೇಲೆ ನಾವು ಪಕ್ಷದಲ್ಲಿ ಇದ್ದೇವೆ. ಅವರ ತಂದೆ ಇದ್ದಾಗ ನಾನು ಶಾಸಕನಾಗಿದ್ದೆ’ ಎಂದು ಅವರು ನೆನಪಿಸಿಕೊಂಡರು.</p>.<p>‘ದಿನೇಶ್ ಗುಂಡೂರಾವ್ ರಾಜೀ<br />ನಾಮೆ ನೀಡಿದ ಬಳಿಕ ಪಕ್ಷದ ವೀಕ್ಷ<br />ಕರು ರಾಜ್ಯಕ್ಕೆ ಭೇಟಿ ನೀಡಿದ್ದರು.ಆಗ ಶೇ 99ರಷ್ಟು ನಾಯಕರು ನನ್ನ ಹೆಸ<br />ರನ್ನೇ ಸೂಚಿಸಿದ್ದಾರೆ. ನಮ್ಮಲ್ಲಿ ಸ್ಪರ್ಧೆ, ಭಿನ್ನಾಭಿಪ್ರಾಯ ಇಲ್ಲ. ಈ ಬಗ್ಗೆ ಮಾಧ್ಯಮ<br />ದವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಎಲ್ಲ ಊಹಾ<br />ಪೋಹಗಳಿಗೆ ಇಂದು ತೆರೆ ಎಳೆಯುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಕ್ಷದ ಶಿಸ್ತು ಪಾಲನೆ ಮಾಡುವವರಿಗೆ ಮೊದಲ ಆದ್ಯತೆ ನೀಡಿ, ಪಕ್ಷ ನಿಷ್ಠೆ ತೋರುವವರಿಗೆ ಸೂಕ್ತ ಸ್ಥಾನ<br />ಮಾನ ನೀಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.</p>.<p>ಕೆಪಿಸಿಸಿ ಕಚೇರಿಗೆ ಸೋಮವಾರ ಭೇಟಿ ನೀಡಿದ ಅವರು ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮವರ ಜತೆ ಮಾತನಾಡಿದರು.</p>.<p>‘ನಾವು ಜಾತಿ ಆಧಾರದ ಮೇಲೆ ಕೆಲಸ ಮಾಡುವುದಿಲ್ಲ. ಎಲ್ಲ ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುವ ಯತ್ನ ಮಾಡುತ್ತೇವೆ. ನಮಗೆ ಸಂಖ್ಯಾಬಲಕ್ಕಿಂತ ಗುಣಬಲ ಇರುವ ನಾಯಕರು ಬೇಕಾಗಿದೆ ಎಂದು ಹೇಳಿದರು.</p>.<p>‘ನಮ್ಮ ನಾಲ್ವರ ಮೇಲೆ ವಿಶ್ವಾಸ ಇಟ್ಟಿರುವ ಹೈಕಮಾಂಡ್ ಈ ಸ್ಥಾನ ನೀಡಿದೆ. ಇದು ಹೊಸ ತಂಡಕ್ಕೆ ನೀಡಿದ ಅಧಿಕಾರವಲ್ಲ.. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ತಳಮಟ್ಟದಿಂದ ಪಕ್ಷ ಕಟ್ಟಲು ನಾವು ಇಂದು ನಿರ್ಧಾರ ಮಾಡಿದ್ದೇವೆ. ’ ಎಂದು ಹೇಳಿದರು.</p>.<p>‘ದೇಶದ ಎಲ್ಲ ಕಡೆಗಳಲ್ಲಿ ಅಧಿಕಾರ ಸಿಕ್ಕಿದರೂ ಬಿಜೆಪಿ ನಾಯಕರಿಗೆ ತೃಪ್ತಿಯಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿರುವ ಕಡೆಗಳಲ್ಲಿ ನಮ್ಮ ನಾಯಕರನ್ನು ಸೆಳೆದುಕೊಳ್ಳುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ನಮ್ಮ ನಾಯಕರು, ಕಾರ್ಯಕರ್ತರು ನಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ’ ಎಂದು ವಿವರಿಸಿದರು.</p>.<p class="Subhead"><strong>ಭಿನ್ನಾಭಿಪ್ರಾಯ ಇಲ್ಲ:</strong>‘ನನ್ನನ್ನು ಪಕ್ಷದ ಅಧ್ಯಕ್ಷರಾಗಿ ನೇಮಿಸಬೇಕು ಎಂದು ಎಂ.ಬಿ. ಪಾಟೀಲರು ಸೇರಿ ಎಲ್ಲ ನಾಯಕರು ಸೂಚಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ’ ಎಂದರು.</p>.<p>ಪಾಟೀಲರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನಮ್ಮಲ್ಲಿ ಯಾವುದೇ ವ್ಯಕ್ತಿಗತ ವಿಚಾರವಿಲ್ಲ. ಸಿದ್ಧಾಂತದ ಆಧಾರದ ಮೇಲೆ ನಾವು ಪಕ್ಷದಲ್ಲಿ ಇದ್ದೇವೆ. ಅವರ ತಂದೆ ಇದ್ದಾಗ ನಾನು ಶಾಸಕನಾಗಿದ್ದೆ’ ಎಂದು ಅವರು ನೆನಪಿಸಿಕೊಂಡರು.</p>.<p>‘ದಿನೇಶ್ ಗುಂಡೂರಾವ್ ರಾಜೀ<br />ನಾಮೆ ನೀಡಿದ ಬಳಿಕ ಪಕ್ಷದ ವೀಕ್ಷ<br />ಕರು ರಾಜ್ಯಕ್ಕೆ ಭೇಟಿ ನೀಡಿದ್ದರು.ಆಗ ಶೇ 99ರಷ್ಟು ನಾಯಕರು ನನ್ನ ಹೆಸ<br />ರನ್ನೇ ಸೂಚಿಸಿದ್ದಾರೆ. ನಮ್ಮಲ್ಲಿ ಸ್ಪರ್ಧೆ, ಭಿನ್ನಾಭಿಪ್ರಾಯ ಇಲ್ಲ. ಈ ಬಗ್ಗೆ ಮಾಧ್ಯಮ<br />ದವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಈ ಎಲ್ಲ ಊಹಾ<br />ಪೋಹಗಳಿಗೆ ಇಂದು ತೆರೆ ಎಳೆಯುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>