<p><strong>ಹೆಸರಘಟ್ಟ:</strong> ‘ಮೀನು ಕೃಷಿಯಲ್ಲಿನ ಸಮಸ್ಯೆಗಳ ಕುರಿತು ವಿಜ್ಞಾನಿಗಳೊಂದಿಗೆ ಚರ್ಚಿಸಿದಾಗ, ಸೂಕ್ತ ಪರಿಹಾರಗಳು ಲಭ್ಯವಾಗುತ್ತವೆ’ ಎಂದು ಜಲಕೃಷಿ ತಜ್ಞ ಸಿ.ವಿ. ಮೋಹನ್ ತಿಳಿಸಿದರು.</p>.<p>ಇಲ್ಲಿನ ಐಸಿಎಆರ್– ಒಳನಾಡು ಮೀನುಗಾರಿಕೆ ಸಂಶೋಧನಾ ಕೇಂದ್ರ, ಸಿಫ್ರಿ–ಸಿಫಾ ಆವರಣದಲ್ಲಿ ನಡೆದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೀನು ಕೃಷಿಕರು ಮತ್ತು ವಿಜ್ಞಾನಿಗಳ ನಡುವೆ ನಿರಂತರ ಸಂವಹನ ನಡೆಯಬೇಕು. ವಿಜ್ಞಾನಿಗಳು ಹೊಸ ಆವಿಷ್ಕಾರಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದು ಅವರು ತಿಳಿಸಿದರು.</p>.<p>‘ಮೀನು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಶಿವಮೊಗ್ಗೆ ಕೆಳದಿ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸಿ. ವಾಸುದೇವಪ್ಪ ಹೇಳಿದರು.</p>.<p>ಕಾರ್ಯಕ್ರಮದ ಅಂಗವಾಗಿ ಕರ್ನಾಟಕದ ನಾಡ ಮೀನು ಬಾರ್ಬೋಡ್ಸ್ ಕರ್ನಾಟಿಕಸ್ ಮತ್ತು ಕೆಮ್ಮೀನಿನ ಮರಿಗಳನ್ನು ಹೆಸರಘಟ್ಟ ಕೆರೆಗೆ ಬಿಡಲಾಯಿತು. ನಂತರ ಪ್ರಗತಿಪರ ಮೀನು ಕೃಷಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲೇರ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ವಿಶ್ವನಾಥ್ ಟಿ.ಎಸ್, ಪ್ರಧಾನ ವಿಜ್ಞಾನಿಗಳಾದ ಎಲ್. ನರಸಿಂಹಮೂರ್ತಿ, ಗಂಗಾಧರ ಬಾರ್ಲಯ ಮತ್ತು ಮೀನು ಕೃಷಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ:</strong> ‘ಮೀನು ಕೃಷಿಯಲ್ಲಿನ ಸಮಸ್ಯೆಗಳ ಕುರಿತು ವಿಜ್ಞಾನಿಗಳೊಂದಿಗೆ ಚರ್ಚಿಸಿದಾಗ, ಸೂಕ್ತ ಪರಿಹಾರಗಳು ಲಭ್ಯವಾಗುತ್ತವೆ’ ಎಂದು ಜಲಕೃಷಿ ತಜ್ಞ ಸಿ.ವಿ. ಮೋಹನ್ ತಿಳಿಸಿದರು.</p>.<p>ಇಲ್ಲಿನ ಐಸಿಎಆರ್– ಒಳನಾಡು ಮೀನುಗಾರಿಕೆ ಸಂಶೋಧನಾ ಕೇಂದ್ರ, ಸಿಫ್ರಿ–ಸಿಫಾ ಆವರಣದಲ್ಲಿ ನಡೆದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೀನು ಕೃಷಿಕರು ಮತ್ತು ವಿಜ್ಞಾನಿಗಳ ನಡುವೆ ನಿರಂತರ ಸಂವಹನ ನಡೆಯಬೇಕು. ವಿಜ್ಞಾನಿಗಳು ಹೊಸ ಆವಿಷ್ಕಾರಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದು ಅವರು ತಿಳಿಸಿದರು.</p>.<p>‘ಮೀನು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಅಗತ್ಯವಿದೆ’ ಎಂದು ಶಿವಮೊಗ್ಗೆ ಕೆಳದಿ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಸಿ. ವಾಸುದೇವಪ್ಪ ಹೇಳಿದರು.</p>.<p>ಕಾರ್ಯಕ್ರಮದ ಅಂಗವಾಗಿ ಕರ್ನಾಟಕದ ನಾಡ ಮೀನು ಬಾರ್ಬೋಡ್ಸ್ ಕರ್ನಾಟಿಕಸ್ ಮತ್ತು ಕೆಮ್ಮೀನಿನ ಮರಿಗಳನ್ನು ಹೆಸರಘಟ್ಟ ಕೆರೆಗೆ ಬಿಡಲಾಯಿತು. ನಂತರ ಪ್ರಗತಿಪರ ಮೀನು ಕೃಷಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ಕಲ್ಲೇರ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ವಿಶ್ವನಾಥ್ ಟಿ.ಎಸ್, ಪ್ರಧಾನ ವಿಜ್ಞಾನಿಗಳಾದ ಎಲ್. ನರಸಿಂಹಮೂರ್ತಿ, ಗಂಗಾಧರ ಬಾರ್ಲಯ ಮತ್ತು ಮೀನು ಕೃಷಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>