ನಗರದಲ್ಲಿ ಸೋಮವಾರ ಕಬ್ಬನ್ ಪಾರ್ಕ್ನ ಸರ್ಕಾರಿ ಮತ್ಸ್ಯಾಲಯದ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ‘ರಾಜ್ಯದಲ್ಲಿ ಒಳನಾಡು, ಸಮುದ್ರ ಮೀನುಗಾರಿಕೆಗೆ ಸಾಕಷ್ಟು ಅವಕಾಶಗಳಿವೆ. ಮೀನು ಉತ್ಪಾದನೆ, ಸಂಸ್ಕರಣೆ, ರಫ್ತಿಗೆ ಆದ್ಯತೆ ನೀಡಲಾಗುವುದು. ರಾಜ್ಯದ 2,500 ಕೆರೆಗಳಲ್ಲಿ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.