<p><strong>ಬೆಂಗಳೂರು:</strong> ಆನ್ಲೈನ್ ಮೂಲಕ ಗ್ರಾಹಕರ ಮನೆ ಬಾಗಿಲಿಗೇ ತಾಜಾ ಮೀನು ಪೂರೈಕೆ ಮಾಡುವ ಯೋಜನೆ ಜಾರಿ ಮಾಡಲಾಗುವುದು ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>ಇದಕ್ಕಾಗಿ ಕೇಂದ್ರ ಸರ್ಕಾರ ಈ ಸಾಲಿನಲ್ಲಿ ₹137 ಕೋಟಿ ಹಣವನ್ನು ಮಂಜೂರು ಮಾಡಿದೆ ಎಂದು ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>ಮನೆ ಬಾಗಿಲಿಗೆ ಮೀನು ಪೂರೈಕೆ ಮಾಡುವ ಯೋಜನೆ ಕಾರ್ಯಗತಗೊಳಿಸಲು ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಇದೇ 21 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ಪ್ರಧಾನಮಂತ್ರಿ ಮತ್ಸ್ಯಸಂಪದ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಮತ್ಸ್ಯಸಂಪದ ಯೋಜನೆ ಕಾರ್ಯಗತಗೊಳಿಸಲು 5 ವರ್ಷಗಳಿಗೆ ₹4,115 ಕೋಟಿ ಪ್ರಸ್ತಾವವನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಮತ್ಸ್ಯ ಸಂಪದ ಯೋಜನೆಯಡಿ ವಿಧಾನಸೌಧದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಿಂದ ಮೀನು ಉತ್ಪಾದನೆ ಮತ್ತು ಮೀನು ಕೃಷಿಕರಿಗೆ ಲಾಭದಾಯಕವಾಗಲಿದೆ ಎಂದರು.</p>.<p>ಮುಂಬರುವ ದಿನಗಳಲ್ಲಿ ಮಂಗಳೂರು ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ ಮಾಡಲಾಗುವುದು. ಮೈಸೂರು, ಶಿವಮೊಗ್ಗ, ಅಂಕೋಲ, ಉಡುಪಿಯಲ್ಲಿ ಮೀನುಗಾರಿಕಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.</p>.<p>‘ದೇಶದ ಮೀನುಗಾರಿಕೆಯಲ್ಲಿ ರಾಜ್ಯ 9 ನೇ ಸ್ಥಾನದಲ್ಲಿದೆ. ಸಮುದ್ರ ಮೀನುಗಾರಿಕೆಯಲ್ಲಿ 4 ನೇ ಸ್ಥಾನದಲ್ಲಿದೆ. ರಾಜ್ಯವು ಮೊದಲ ಸ್ಥಾನಕ್ಕೆ ತಲುಪಬೇಕು ಎಂಬುದು ನಮ್ಮ ಉದ್ದೇಶ’ ಎಂದರು.</p>.<p class="Subhead">ಮುಖ್ಯಮಂತ್ರಿಯವರ ಪರಮಾಧಿಕಾರ: ಸಚಿವ ಸಂಪುಟದಲ್ಲಿ ಯಾರನ್ನು ಇಟ್ಟುಕೊಳ್ಳಬೇಕು ಅಥವಾ ಬಿಡಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು. ಅದು ಅವರ ಪರಮಾಧಿಕಾರ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ವರಿಷ್ಠರು ಸೇರಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇವರೆಲ್ಲ ಸೇರಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಪುನಾರಚನೆಯಾದರೆ ಕೆಲವರನ್ನು ಕೈಬಿಡುವುದು ಸಹಜ. ಈ ವಿಷಯ ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆನ್ಲೈನ್ ಮೂಲಕ ಗ್ರಾಹಕರ ಮನೆ ಬಾಗಿಲಿಗೇ ತಾಜಾ ಮೀನು ಪೂರೈಕೆ ಮಾಡುವ ಯೋಜನೆ ಜಾರಿ ಮಾಡಲಾಗುವುದು ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>ಇದಕ್ಕಾಗಿ ಕೇಂದ್ರ ಸರ್ಕಾರ ಈ ಸಾಲಿನಲ್ಲಿ ₹137 ಕೋಟಿ ಹಣವನ್ನು ಮಂಜೂರು ಮಾಡಿದೆ ಎಂದು ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>ಮನೆ ಬಾಗಿಲಿಗೆ ಮೀನು ಪೂರೈಕೆ ಮಾಡುವ ಯೋಜನೆ ಕಾರ್ಯಗತಗೊಳಿಸಲು ಆ್ಯಪ್ ಸಿದ್ಧಪಡಿಸಲಾಗುತ್ತಿದೆ. ಇದೇ 21 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ಪ್ರಧಾನಮಂತ್ರಿ ಮತ್ಸ್ಯಸಂಪದ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಮತ್ಸ್ಯಸಂಪದ ಯೋಜನೆ ಕಾರ್ಯಗತಗೊಳಿಸಲು 5 ವರ್ಷಗಳಿಗೆ ₹4,115 ಕೋಟಿ ಪ್ರಸ್ತಾವವನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಮತ್ಸ್ಯ ಸಂಪದ ಯೋಜನೆಯಡಿ ವಿಧಾನಸೌಧದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಿಂದ ಮೀನು ಉತ್ಪಾದನೆ ಮತ್ತು ಮೀನು ಕೃಷಿಕರಿಗೆ ಲಾಭದಾಯಕವಾಗಲಿದೆ ಎಂದರು.</p>.<p>ಮುಂಬರುವ ದಿನಗಳಲ್ಲಿ ಮಂಗಳೂರು ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ ಮಾಡಲಾಗುವುದು. ಮೈಸೂರು, ಶಿವಮೊಗ್ಗ, ಅಂಕೋಲ, ಉಡುಪಿಯಲ್ಲಿ ಮೀನುಗಾರಿಕಾ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.</p>.<p>‘ದೇಶದ ಮೀನುಗಾರಿಕೆಯಲ್ಲಿ ರಾಜ್ಯ 9 ನೇ ಸ್ಥಾನದಲ್ಲಿದೆ. ಸಮುದ್ರ ಮೀನುಗಾರಿಕೆಯಲ್ಲಿ 4 ನೇ ಸ್ಥಾನದಲ್ಲಿದೆ. ರಾಜ್ಯವು ಮೊದಲ ಸ್ಥಾನಕ್ಕೆ ತಲುಪಬೇಕು ಎಂಬುದು ನಮ್ಮ ಉದ್ದೇಶ’ ಎಂದರು.</p>.<p class="Subhead">ಮುಖ್ಯಮಂತ್ರಿಯವರ ಪರಮಾಧಿಕಾರ: ಸಚಿವ ಸಂಪುಟದಲ್ಲಿ ಯಾರನ್ನು ಇಟ್ಟುಕೊಳ್ಳಬೇಕು ಅಥವಾ ಬಿಡಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು. ಅದು ಅವರ ಪರಮಾಧಿಕಾರ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.</p>.<p>ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ವರಿಷ್ಠರು ಸೇರಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇವರೆಲ್ಲ ಸೇರಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಪುನಾರಚನೆಯಾದರೆ ಕೆಲವರನ್ನು ಕೈಬಿಡುವುದು ಸಹಜ. ಈ ವಿಷಯ ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>