ವಿಸ್ತರಣೆಯೋ, ಪುನಾರಚನೆಯೋ ಎಂಬುದನ್ನು ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ವರಿಷ್ಠರು ಸೇರಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇವರೆಲ್ಲ ಸೇರಿ ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ. ಪುನಾರಚನೆಯಾದರೆ ಕೆಲವರನ್ನು ಕೈಬಿಡುವುದು ಸಹಜ. ಈ ವಿಷಯ ಪಕ್ಷದಲ್ಲಿ ಚರ್ಚೆಯಾಗುತ್ತಿದೆ ಎಂದೂ ಹೇಳಿದರು.