‘ಸಂಪಂಗಿರಾಮನಗರದ ಮಿಷನ್ ರಸ್ತೆಯ ತಿರುವಿನಲ್ಲಿ ಒಂಟಿಯಾಗಿ ಬರುವ ಸಾರ್ವಜನಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ನಗದು-ಚಿನ್ನ ದರೋಡೆ ಮಾಡಲು ಆರೋಪಿಗಳು ಸಜ್ಜಾಗಿದ್ದರು. ಈ ವೇಳೆ ಎಲ್ಲರನ್ನೂ ಬಂಧಿಸಲಾಗಿದೆ. ಆರೋಪಿಗಳ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಸಂತೋಷ್ ಸಂಪಂಗಿರಾಮನಗರದ ರೌಡಿಶೀಟರ್ ಆಗಿದ್ದು, ಕೊಲೆ ಯತ್ನ, ದರೋಡೆ ಯತ್ನ ಸೇರಿದಂತೆ ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 13ಕ್ಕೂ ಹೆಚ್ಚು ಪ್ರಕರಣಗಳಿವೆ. ಆಗಸ್ಟ್ ನಲ್ಲಿ ಕೊಲೆ ಯತ್ನದ ಬಳಿಕ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.