<p><strong>ಬೆಂಗಳೂರು</strong>: ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾಗಿದ್ದ ಬಸವನಗುಡಿ ಕಡಲೆಕಾಯಿ ಪರಿಷೆ ಶುಕ್ರವಾರ ಮುಕ್ತಾಯವಾಯಿತು. 12 ಲಕ್ಷಕ್ಕೂ ಅಧಿಕ ಜನರು ಪರಿಷೆಗೆ ಭೇಟಿ ನೀಡಿ ಶೇಂಗಾ ಖರೀದಿಸಿದರು.</p>.<p>ಬಸವನಗುಡಿ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಡಲೆಕಾಯಿ ಮಾರಾಟ, ಖರೀದಿಯ ಸಂಭ್ರಮ ಮನೆಮಾಡಿತ್ತು. ಗುರುವಾರ ಒಂದೇ ದಿನ 6 ಲಕ್ಷ ಜನರು ಭೇಟಿ ನೀಡಿದ್ದರೆ, ಶುಕ್ರವಾರ ಈ ಸಂಖ್ಯೆ ದ್ವಿಗುಣಗೊಂಡಿತ್ತು.</p>.<p>ದೊಡ್ಡ ಬಸವಣ್ಣನೊಂದಿಗೆ ದೊಡ್ಡ ಗಣಪತಿ, ಕಾರಂಜಿ ಆಂಜನೇಯನ ದರ್ಶನ ಪಡೆದ ಜನರು ಜಾತ್ರೆಯ ಸೊಬಗನ್ನು ಸವಿದರು. ಮಧ್ಯೆ ಮಧ್ಯೆ ಮಳೆ ಬಂದಾಗ ಸ್ವಲ್ಪ ಹೊತ್ತು ಸಡಗರ ಕಡಿಮೆಯಾದರೂ ಮಳೆ ನಿಂತಾಗ ಮತ್ತದೇ ಸಂಭ್ರಮ ಪಡಿಮೂಡಿತು. </p>.<p>ಕಡಲಕಾಯಿ ಪರಿಷೆಯಲ್ಲಿ ಮೊದಲ ಬಾರಿಗೆ ವಿಶೇಷ ದೀಪಾಲಂಕಾರ ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು. ಇದು ಭಕ್ತರನ್ನು ಸೆಳೆಯಿತು.</p>.<p>ನಾರ್ತ್ ರೋಡ್, ಕೆ.ಆರ್. ರಸ್ತೆ, ಆಶ್ರಮ ವೃತ್ತ, ಡಿವಿಜಿ ರಸ್ತೆ, ಗಾಂಧಿ ಬಜಾರ್ ಮುಖ್ಯರಸ್ತೆ, ನೆಟ್ಟಕಲ್ಲಪ್ಪ ಸರ್ಕಲ್ ರಸ್ತೆ, ಎನ್.ಆರ್. ಕಾಲೊನಿ ರಸ್ತೆಯಲ್ಲಿನ ದೀಪಾಲಂಕಾರಗಳು ಜಗಮಗಿಸಿದವು. </p>.<p>4,500ಕ್ಕೂ ಅಧಿಕ ಮಳಿಗೆಗಳಿದ್ದ ಪರಿಷೆ ಮುಕ್ತಾಯವಾಗುತ್ತಿದ್ದಂತೆ ಸ್ವಚ್ಛತಾ ಕಾರ್ಯ ಆರಂಭವಾಗಿದೆ ಎಂದು ಪರಿಷೆ ಆಯೋಜಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾಗಿದ್ದ ಬಸವನಗುಡಿ ಕಡಲೆಕಾಯಿ ಪರಿಷೆ ಶುಕ್ರವಾರ ಮುಕ್ತಾಯವಾಯಿತು. 12 ಲಕ್ಷಕ್ಕೂ ಅಧಿಕ ಜನರು ಪರಿಷೆಗೆ ಭೇಟಿ ನೀಡಿ ಶೇಂಗಾ ಖರೀದಿಸಿದರು.</p>.<p>ಬಸವನಗುಡಿ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಡಲೆಕಾಯಿ ಮಾರಾಟ, ಖರೀದಿಯ ಸಂಭ್ರಮ ಮನೆಮಾಡಿತ್ತು. ಗುರುವಾರ ಒಂದೇ ದಿನ 6 ಲಕ್ಷ ಜನರು ಭೇಟಿ ನೀಡಿದ್ದರೆ, ಶುಕ್ರವಾರ ಈ ಸಂಖ್ಯೆ ದ್ವಿಗುಣಗೊಂಡಿತ್ತು.</p>.<p>ದೊಡ್ಡ ಬಸವಣ್ಣನೊಂದಿಗೆ ದೊಡ್ಡ ಗಣಪತಿ, ಕಾರಂಜಿ ಆಂಜನೇಯನ ದರ್ಶನ ಪಡೆದ ಜನರು ಜಾತ್ರೆಯ ಸೊಬಗನ್ನು ಸವಿದರು. ಮಧ್ಯೆ ಮಧ್ಯೆ ಮಳೆ ಬಂದಾಗ ಸ್ವಲ್ಪ ಹೊತ್ತು ಸಡಗರ ಕಡಿಮೆಯಾದರೂ ಮಳೆ ನಿಂತಾಗ ಮತ್ತದೇ ಸಂಭ್ರಮ ಪಡಿಮೂಡಿತು. </p>.<p>ಕಡಲಕಾಯಿ ಪರಿಷೆಯಲ್ಲಿ ಮೊದಲ ಬಾರಿಗೆ ವಿಶೇಷ ದೀಪಾಲಂಕಾರ ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು. ಇದು ಭಕ್ತರನ್ನು ಸೆಳೆಯಿತು.</p>.<p>ನಾರ್ತ್ ರೋಡ್, ಕೆ.ಆರ್. ರಸ್ತೆ, ಆಶ್ರಮ ವೃತ್ತ, ಡಿವಿಜಿ ರಸ್ತೆ, ಗಾಂಧಿ ಬಜಾರ್ ಮುಖ್ಯರಸ್ತೆ, ನೆಟ್ಟಕಲ್ಲಪ್ಪ ಸರ್ಕಲ್ ರಸ್ತೆ, ಎನ್.ಆರ್. ಕಾಲೊನಿ ರಸ್ತೆಯಲ್ಲಿನ ದೀಪಾಲಂಕಾರಗಳು ಜಗಮಗಿಸಿದವು. </p>.<p>4,500ಕ್ಕೂ ಅಧಿಕ ಮಳಿಗೆಗಳಿದ್ದ ಪರಿಷೆ ಮುಕ್ತಾಯವಾಗುತ್ತಿದ್ದಂತೆ ಸ್ವಚ್ಛತಾ ಕಾರ್ಯ ಆರಂಭವಾಗಿದೆ ಎಂದು ಪರಿಷೆ ಆಯೋಜಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>