<p><strong>ಬೆಂಗಳೂರು</strong>: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಭೇದಿಸಲು ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ವಿದ್ಯಾರಣ್ಯಪುರ ಹಾಗೂ ವರ್ತೂರು ಠಾಣೆ ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಶೇಖ್ ನಿಸಾರ್ (20), ಸಾಹಿಲ್ ಪಾಷಾ (27), ಶೇಖ್ ತೌಸೀಫ್ (21), ತಮಿಳುನಾಡಿನ ಬಾಬು (24) ಹಾಗೂ ನಿತಿನ್ (23) ಬಂಧಿತರು. ಇವರಿಂದ ₹ 30 ಲಕ್ಷ ಮೌಲ್ಯದ 43 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ನೋಂದಣಿ ಫಲಕ ಬದಲಿಸಿ ಮಾರಾಟ: ‘ಆರೋಪಿಗಳಾದ ನಿಸಾರ್, ಸಾಹಿಲ್ ಹಾಗೂ ತೌಸೀಫ್ ಮೂವರೂ ಅಪರಾಧ ಹಿನ್ನೆಲೆಯುಳ್ಳವರು. ಇವರಿಂದ ₹ 15 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ವಿದ್ಯಾರಣ್ಯಪುರ ಪೊಲೀಸರು ಹೇಳಿದರು.</p>.<p>‘ಕಳ್ಳತನ ಹಾಗೂ ಸುಲಿಗೆ ಮಾಡುವುದನ್ನೇ ಆರೋಪಿಗಳು ವೃತ್ತಿ ಮಾಡಿಕೊಂಡಿದ್ದರು. ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ವಾಹನಗಳನ್ನು ಗುರುತಿಸಿ ಕದ್ದೊಯ್ಯುತ್ತಿದ್ದರು. ನೋಂದಣಿ ಫಲಕ ಬದಲಾಯಿಸಿ, ಕಡಿಮೆ ಬೆಲೆಗೆ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಂಡು, ಮೋಜು–ಮಸ್ತಿ ಮಾಡುತ್ತಿದ್ದರು’ ಎಂದರು.</p>.<p>‘ವಿಜಯಾ ಬ್ಯಾಂಕ್ ಲೇಔಟ್ ನಿವಾಸಿ<br />ಯೊಬ್ಬರ ಬೈಕ್ ಇತ್ತೀಚೆಗೆ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿ<br />ಬಿದ್ದರು.’ ‘ಯಲಹಂಕ ನ್ಯೂ ಟೌನ್, ಕೊಡಿಗೇಹಳ್ಳಿ, ಯಶವಂತಪುರ, ಜೆ.ಸಿ.ನಗರ, ಹಣ್ಣೂರು, ಬಾಗಲಗುಂಟೆ, ಶೇಷಾದ್ರಿಪುರ, ವಿಜಯನಗರ, ಬನಶಂಕರಿ, ರಾಜಾಜಿನಗರ ಹಾಗೂ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಅಪರಾಧ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ತಮಿಳುನಾಡಿನಿಂದ ಬಂದು ಕಳ್ಳತನ: ‘ಆರೋಪಿಗಳಾದ ಬಾಬು ಹಾಗೂ ನಿತಿನ್, ತಮಿಳುನಾಡಿನಿಂದ ಆಗಾಗ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕದಿಯುತ್ತಿದ್ದರು. ಅಂಥ ವಾಹನಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಇವರಿಂದ ₹ 15 ಲಕ್ಷ ಮೌಲ್ಯದ 20 ವಾಹನ ಜಪ್ತಿ ಮಾಡಲಾಗಿದೆ’ ಎಂದು ವರ್ತೂರು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಭೇದಿಸಲು ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ವಿದ್ಯಾರಣ್ಯಪುರ ಹಾಗೂ ವರ್ತೂರು ಠಾಣೆ ಪೊಲೀಸರು, ಕೃತ್ಯದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಶೇಖ್ ನಿಸಾರ್ (20), ಸಾಹಿಲ್ ಪಾಷಾ (27), ಶೇಖ್ ತೌಸೀಫ್ (21), ತಮಿಳುನಾಡಿನ ಬಾಬು (24) ಹಾಗೂ ನಿತಿನ್ (23) ಬಂಧಿತರು. ಇವರಿಂದ ₹ 30 ಲಕ್ಷ ಮೌಲ್ಯದ 43 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ನೋಂದಣಿ ಫಲಕ ಬದಲಿಸಿ ಮಾರಾಟ: ‘ಆರೋಪಿಗಳಾದ ನಿಸಾರ್, ಸಾಹಿಲ್ ಹಾಗೂ ತೌಸೀಫ್ ಮೂವರೂ ಅಪರಾಧ ಹಿನ್ನೆಲೆಯುಳ್ಳವರು. ಇವರಿಂದ ₹ 15 ಲಕ್ಷ ಮೌಲ್ಯದ 23 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ವಿದ್ಯಾರಣ್ಯಪುರ ಪೊಲೀಸರು ಹೇಳಿದರು.</p>.<p>‘ಕಳ್ಳತನ ಹಾಗೂ ಸುಲಿಗೆ ಮಾಡುವುದನ್ನೇ ಆರೋಪಿಗಳು ವೃತ್ತಿ ಮಾಡಿಕೊಂಡಿದ್ದರು. ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ವಾಹನಗಳನ್ನು ಗುರುತಿಸಿ ಕದ್ದೊಯ್ಯುತ್ತಿದ್ದರು. ನೋಂದಣಿ ಫಲಕ ಬದಲಾಯಿಸಿ, ಕಡಿಮೆ ಬೆಲೆಗೆ ಮಾರುತ್ತಿದ್ದರು. ಬಂದ ಹಣವನ್ನು ಹಂಚಿಕೊಂಡು, ಮೋಜು–ಮಸ್ತಿ ಮಾಡುತ್ತಿದ್ದರು’ ಎಂದರು.</p>.<p>‘ವಿಜಯಾ ಬ್ಯಾಂಕ್ ಲೇಔಟ್ ನಿವಾಸಿ<br />ಯೊಬ್ಬರ ಬೈಕ್ ಇತ್ತೀಚೆಗೆ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿ<br />ಬಿದ್ದರು.’ ‘ಯಲಹಂಕ ನ್ಯೂ ಟೌನ್, ಕೊಡಿಗೇಹಳ್ಳಿ, ಯಶವಂತಪುರ, ಜೆ.ಸಿ.ನಗರ, ಹಣ್ಣೂರು, ಬಾಗಲಗುಂಟೆ, ಶೇಷಾದ್ರಿಪುರ, ವಿಜಯನಗರ, ಬನಶಂಕರಿ, ರಾಜಾಜಿನಗರ ಹಾಗೂ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಅಪರಾಧ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.</p>.<p class="Subhead">ತಮಿಳುನಾಡಿನಿಂದ ಬಂದು ಕಳ್ಳತನ: ‘ಆರೋಪಿಗಳಾದ ಬಾಬು ಹಾಗೂ ನಿತಿನ್, ತಮಿಳುನಾಡಿನಿಂದ ಆಗಾಗ ಬೆಂಗಳೂರಿಗೆ ಬಂದು ದ್ವಿಚಕ್ರ ವಾಹನ ಕದಿಯುತ್ತಿದ್ದರು. ಅಂಥ ವಾಹನಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಇವರಿಂದ ₹ 15 ಲಕ್ಷ ಮೌಲ್ಯದ 20 ವಾಹನ ಜಪ್ತಿ ಮಾಡಲಾಗಿದೆ’ ಎಂದು ವರ್ತೂರು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>