ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜಾಲದ ಜೊತೆ ಶಾಮೀಲಾಗಿದ್ದ ಆರೋಪದಡಿ ಸದಾಶಿವನಗರ ಠಾಣೆಯ ಐವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
'ಪೊಲೀಸರ ವಿರುದ್ಧ ಆರೋಪ ಕೇಳಿಬಂದಿತ್ತು. ಪ್ರಾಥಮಿಕ ಮಾಹಿತಿ ಆಧರಿಸಿ ಅಮಾನತು ಮಾಡಲಾಗಿದೆ. ಇಲಾಖೆ ವಿಚಾರಣೆ ನಡೆಯುತ್ತಿದೆ' ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದರು.