ಸೋಮವಾರವಷ್ಟೇ ಪಕ್ಷ ಸೇರಿದ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಸೇರಿದಂತೆ ನಾಲ್ವರು ಹಿರಿಯ ಉಪಾಧ್ಯಕ್ಷರು, ಏಳು ಮಂದಿ ಉಪಾಧ್ಯಕ್ಷರು, ವಕೀಲ ಎ.ಪಿ. ರಂಗನಾಥ್ ಸೇರಿದಂತೆ ಹತ್ತು ಮಂದಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹತ್ತು ಮಂದಿ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಖಜಾಂಚಿಯಾಗಿ ಶಾಸಕ ಬಿ.ಎನ್. ರವಿಕುಮಾರ್ ಅವರನ್ನು ನೇಮಿಸಲಾಗಿದೆ.