<p><strong>ಬೆಂಗಳೂರು</strong>: ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಾಕ್ಷಿ ಹೇಳದಂತೆ ಸಾಕ್ಷಿದಾರರಿಗೆ ಕೊಲೆ ಬೆದರಿಕೆಯೊಡ್ಡಿದ್ದ ಅಪರಾಧಿ ರಮೇಶ್ (30) ಎಂಬಾತನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ನಗರದ ಸಿಸಿಎಚ್ 57ನೇ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>‘2016ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣವೊಂದರಲ್ಲಿ ಮರಿಯಪ್ಪನಪಾಳ್ಯ ನಿವಾಸಿ ರಮೇಶ್ನನ್ನು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ರಮೇಶ್, ಪ್ರಕರಣದ ಸಾಕ್ಷಿದಾರರಿಗೆ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ. ಈ ಬಗ್ಗೆ ಕೆ.ಪಿ.ಅಗ್ರಹಾರ ಠಾಣೆಯಲ್ಲಿ 2018ರಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಪ್ರಕರಣದ ತನಿಖೆ ಕೈಗೊಂಡಿದ್ದ ಕೆ.ಪಿ. ಅಗ್ರಹಾರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಟಿ. ಗೋವಿಂದಯ್ಯ ವಿಚಾರಣೆ ನಡೆಸಿ ಆದೇಶ ಹೊರಡಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ವೀಣಾ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಾಕ್ಷಿ ಹೇಳದಂತೆ ಸಾಕ್ಷಿದಾರರಿಗೆ ಕೊಲೆ ಬೆದರಿಕೆಯೊಡ್ಡಿದ್ದ ಅಪರಾಧಿ ರಮೇಶ್ (30) ಎಂಬಾತನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ನಗರದ ಸಿಸಿಎಚ್ 57ನೇ ನ್ಯಾಯಾಲಯ ಆದೇಶ ಹೊರಡಿಸಿದೆ.</p>.<p>‘2016ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣವೊಂದರಲ್ಲಿ ಮರಿಯಪ್ಪನಪಾಳ್ಯ ನಿವಾಸಿ ರಮೇಶ್ನನ್ನು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ರಮೇಶ್, ಪ್ರಕರಣದ ಸಾಕ್ಷಿದಾರರಿಗೆ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ. ಈ ಬಗ್ಗೆ ಕೆ.ಪಿ.ಅಗ್ರಹಾರ ಠಾಣೆಯಲ್ಲಿ 2018ರಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಪ್ರಕರಣದ ತನಿಖೆ ಕೈಗೊಂಡಿದ್ದ ಕೆ.ಪಿ. ಅಗ್ರಹಾರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಟಿ. ಗೋವಿಂದಯ್ಯ ವಿಚಾರಣೆ ನಡೆಸಿ ಆದೇಶ ಹೊರಡಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ವೀಣಾ ವಾದಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>