<p><strong>ಬೆಂಗಳೂರು</strong>: ‘ಕೋವಿಡ್ ಕಾರಣದಿಂದ ಆಗಿರುವ ಆರ್ಥಿಕ ಹಿಂಜರಿತದಿಂದ ಕೈಗಾರಿಕೆಗಳನ್ನು ಮೇಲೆತ್ತಲು ಕಾರ್ಮಿಕರ ಕನಿಷ್ಠ ವೇತನ ಪ್ರಮಾಣ ಕಡಿಮೆ ಮಾಡುವುದೂ ಸೇರಿ ಕಾರ್ಮಿಕ ಕಾನೂನುಗಳಿಗೆ ವಿನಾಯಿತಿ ನೀಡಬೇಕು’ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್ಕೆಸಿಸಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಮುಂದಿನ ಸಾಲಿನ ಬಜೆಟ್ ಪೂರ್ವ ಮನವಿಯನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಿರುವ ಎಫ್ಕೆಸಿಸಿಐ ಅಧ್ಯಕ್ಷ ಪೆರಿಕ್ಕಲ್ ಎಂ. ಸುಂದರ್, ‘ಕನಿಷ್ಠ ವೇತನದ ಪ್ರಮಾಣ ಕಡಿಮೆ ಮಾಡಿದರೆ ಇನ್ನಷ್ಟು ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಹೇಳಿದ್ದಾರೆ.</p>.<p>‘ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಹಣಕಾಸು ಒದಗಿಸಿರುವ ರಾಜ್ಯ ಹಣಕಾಸು ನಿಗಮಗಳನ್ನು ಆತ್ಮನಿರ್ಭರ ಪ್ಯಾಕೇಜ್ ವ್ಯಾಪ್ತಿಗೆ ತರಬೇಕು’ ಎಂದು ಕೋರಿದ್ದಾರೆ.</p>.<p>‘ಆನ್ಲೈನ್ ವಹಿವಾಟು ಉತ್ತೇಜಿಸುವ ನಿಟ್ಟಿನಲ್ಲಿ ಯುಪಿಐ, ನೆಫ್ಟ್ ರೀತಿಯ ಆನ್ಲೈನ್ ಪಾವತಿ ಮೇಲೆ ಶುಲ್ಕ ವಿಧಿಸುವುದನ್ನು ತಡೆಯಬೇಕು. ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳು ಒಂದಕ್ಕಿಂತ ಹೆಚ್ಚು ಚಾಲ್ತಿ ಖಾತೆಗಳನ್ನು ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೋವಿಡ್ ಕಾರಣದಿಂದ ಆಗಿರುವ ಆರ್ಥಿಕ ಹಿಂಜರಿತದಿಂದ ಕೈಗಾರಿಕೆಗಳನ್ನು ಮೇಲೆತ್ತಲು ಕಾರ್ಮಿಕರ ಕನಿಷ್ಠ ವೇತನ ಪ್ರಮಾಣ ಕಡಿಮೆ ಮಾಡುವುದೂ ಸೇರಿ ಕಾರ್ಮಿಕ ಕಾನೂನುಗಳಿಗೆ ವಿನಾಯಿತಿ ನೀಡಬೇಕು’ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್ಕೆಸಿಸಿಐ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಮುಂದಿನ ಸಾಲಿನ ಬಜೆಟ್ ಪೂರ್ವ ಮನವಿಯನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಿರುವ ಎಫ್ಕೆಸಿಸಿಐ ಅಧ್ಯಕ್ಷ ಪೆರಿಕ್ಕಲ್ ಎಂ. ಸುಂದರ್, ‘ಕನಿಷ್ಠ ವೇತನದ ಪ್ರಮಾಣ ಕಡಿಮೆ ಮಾಡಿದರೆ ಇನ್ನಷ್ಟು ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಹೇಳಿದ್ದಾರೆ.</p>.<p>‘ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಹಣಕಾಸು ಒದಗಿಸಿರುವ ರಾಜ್ಯ ಹಣಕಾಸು ನಿಗಮಗಳನ್ನು ಆತ್ಮನಿರ್ಭರ ಪ್ಯಾಕೇಜ್ ವ್ಯಾಪ್ತಿಗೆ ತರಬೇಕು’ ಎಂದು ಕೋರಿದ್ದಾರೆ.</p>.<p>‘ಆನ್ಲೈನ್ ವಹಿವಾಟು ಉತ್ತೇಜಿಸುವ ನಿಟ್ಟಿನಲ್ಲಿ ಯುಪಿಐ, ನೆಫ್ಟ್ ರೀತಿಯ ಆನ್ಲೈನ್ ಪಾವತಿ ಮೇಲೆ ಶುಲ್ಕ ವಿಧಿಸುವುದನ್ನು ತಡೆಯಬೇಕು. ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳು ಒಂದಕ್ಕಿಂತ ಹೆಚ್ಚು ಚಾಲ್ತಿ ಖಾತೆಗಳನ್ನು ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>