ಪ್ರಧಾನಿಯ ಸಮ್ಮುಖದಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಈ ವಿಷಯದ ಬಗ್ಗೆ ಆರೋಪ, ಪ್ರತ್ಯಾರೋಪ ನಡೆಸಿದಾಗ, ಅವರು ಮಧ್ಯಪ್ರವೇಶಿಸಿ ಮಹದಾಯಿ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಬಹುದಿತ್ತು. ದೇಶದ ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾದ ಪ್ರಧಾನಿ, ಈಗಲಾದರೂ ಜವಾಬ್ದಾರಿಯ ನಡೆ ಪ್ರದರ್ಶಿಸಿ, ಕುಡಿಯುವ ನೀರಿನ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಮುಂದಾಗಬಾರದೇಕೆ?