<p><strong>ಯಲಹಂಕ:</strong> ನೆರೆ ಪರಿಹಾರ ಹಾಗೂ ಕೋವಿಡ್-ನಿಯಂತ್ರಣ ಕಾರ್ಯವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.</p>.<p>ಹುಣಸಮಾರನಹಳ್ಳಿ ಸಮೀಪದ ಭಾರತಿನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ’ಮಡಿಕೇರಿ, ಶಿವಮೊಗ್ಗ, ಬೆಳಗಾವಿ ಮತ್ತಿತರ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದಾಗಿ ಜನರು ಆಸ್ತಿಪಾಸ್ತಿ<br />ಕಳೆದುಕೊಳ್ಳುವುದರ ಜೊತೆಗೆ ಬೆಳೆಹಾನಿಯಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರ ಇಲ್ಲಿಯವರೆಗೂ ಎಚ್ಚೆತ್ತುಕೊಂಡಿಲ್ಲ‘ ಎಂದು ದೂರಿದರು.</p>.<p>‘ನೆರೆ ಪರಿಹಾರಕ್ಕಾಗಿ ಸರ್ಕಾರ ₹50 ಕೋಟಿ ಬಿಡುಗಡೆ ಮಾಡಿದ್ದು, ಈ ಹಣದಿಂದ ಪರಿಸ್ಥಿತಿ ನಿಭಾಯಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಇತ್ತ ಕೊರೊನಾ ನಿಯಂತ್ರಣ ಕಾರ್ಯವನ್ನೂ ಸಮರ್ಪಕವಾಗಿ ನಿರ್ವಹಿಸದ ಪರಿಣಾಮ, ಪ್ರಕರಣಗಳು ಹೆಚ್ಚಾಗಿ ದಿನೇದಿನೇ ಹೊಸ ದಾಖಲೆಗಳು ನಿರ್ಮಾಣವಾಗುತ್ತಿವೆ.<br />ಆದರೂ, ಸರ್ಕಾರ ದುರಂತದಲ್ಲಿ ಹಣ ಮಾಡುವುದರಲ್ಲೇ ತೊಡಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಅಶೋಕನ್ ಮಾತನಾಡಿ, ‘ಬೆಂಗಳೂರಿನ ಕೊಳಚೆನೀರನ್ನು ಸಂಸ್ಕರಿಸಿ ಕೆರೆಗಳನ್ನು ತುಂಬಿಸುವ ಭಾಗವಾಗಿ, ಹುಣಸಮಾರನಹಳ್ಳಿ ಕೆರೆಗೆ ನೀರು ಹರಿಸಿರುವುದರಿಂದ ಸುತ್ತಮುತ್ತಲ ಪ್ರದೇಶಗಳ ಕೊಳವೆಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಾಗಲಿದೆ. ಇದರಿಂದ ಶೀಘ್ರದಲ್ಲೇ ಈ ಭಾಗದ ಜನರ ನೀರಿನ ಬವಣೆ ನೀಗಲಿದೆ‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ನೆರೆ ಪರಿಹಾರ ಹಾಗೂ ಕೋವಿಡ್-ನಿಯಂತ್ರಣ ಕಾರ್ಯವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.</p>.<p>ಹುಣಸಮಾರನಹಳ್ಳಿ ಸಮೀಪದ ಭಾರತಿನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ’ಮಡಿಕೇರಿ, ಶಿವಮೊಗ್ಗ, ಬೆಳಗಾವಿ ಮತ್ತಿತರ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದಾಗಿ ಜನರು ಆಸ್ತಿಪಾಸ್ತಿ<br />ಕಳೆದುಕೊಳ್ಳುವುದರ ಜೊತೆಗೆ ಬೆಳೆಹಾನಿಯಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸರ್ಕಾರ ಇಲ್ಲಿಯವರೆಗೂ ಎಚ್ಚೆತ್ತುಕೊಂಡಿಲ್ಲ‘ ಎಂದು ದೂರಿದರು.</p>.<p>‘ನೆರೆ ಪರಿಹಾರಕ್ಕಾಗಿ ಸರ್ಕಾರ ₹50 ಕೋಟಿ ಬಿಡುಗಡೆ ಮಾಡಿದ್ದು, ಈ ಹಣದಿಂದ ಪರಿಸ್ಥಿತಿ ನಿಭಾಯಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಇತ್ತ ಕೊರೊನಾ ನಿಯಂತ್ರಣ ಕಾರ್ಯವನ್ನೂ ಸಮರ್ಪಕವಾಗಿ ನಿರ್ವಹಿಸದ ಪರಿಣಾಮ, ಪ್ರಕರಣಗಳು ಹೆಚ್ಚಾಗಿ ದಿನೇದಿನೇ ಹೊಸ ದಾಖಲೆಗಳು ನಿರ್ಮಾಣವಾಗುತ್ತಿವೆ.<br />ಆದರೂ, ಸರ್ಕಾರ ದುರಂತದಲ್ಲಿ ಹಣ ಮಾಡುವುದರಲ್ಲೇ ತೊಡಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಅಶೋಕನ್ ಮಾತನಾಡಿ, ‘ಬೆಂಗಳೂರಿನ ಕೊಳಚೆನೀರನ್ನು ಸಂಸ್ಕರಿಸಿ ಕೆರೆಗಳನ್ನು ತುಂಬಿಸುವ ಭಾಗವಾಗಿ, ಹುಣಸಮಾರನಹಳ್ಳಿ ಕೆರೆಗೆ ನೀರು ಹರಿಸಿರುವುದರಿಂದ ಸುತ್ತಮುತ್ತಲ ಪ್ರದೇಶಗಳ ಕೊಳವೆಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಾಗಲಿದೆ. ಇದರಿಂದ ಶೀಘ್ರದಲ್ಲೇ ಈ ಭಾಗದ ಜನರ ನೀರಿನ ಬವಣೆ ನೀಗಲಿದೆ‘ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>