ರಾಜ್ಯದಲ್ಲಿ ತಲೆದೋರಿರುವ ಪ್ರವಾಹ ಸ್ಥಿತಿಯ ಕುರಿತು ಗೃಹ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೂ ಮಾಹಿತಿ ಪಡೆದ ಪ್ರಧಾನಿ, ಶೀಘ್ರದಲ್ಲೇ ಕೇಂದ್ರದ ಅಧ್ಯಯನ ತಂಡ ಕಳುಹಿಸಿ, ವರದಿ ಪಡೆದು ನಷ್ಟ ಪರಿಹಾರ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಅವರು ಹೇಳಿದರು.