ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆಯಿಂದ ಹಾನಿ: ಅಂಕಪಟ್ಟಿ ಉಚಿತ ವಿತರಿಸಲು ಮನವಿ

Last Updated 17 ಆಗಸ್ಟ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ನೆರೆ ಹಾವಳಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಅಂಕಪಟ್ಟಿಗಳು ನಾಶವಾಗಿರುವ ಕಾರಣಕ್ಕೆ ವಿದ್ಯಾರ್ಥಿಗಳು ಪುನಃ ಅಂಕ ಪಟ್ಟಿಗಾಗಿ ಕೋರಿಕೆ ಸಲ್ಲಿಸಿದರೆ, ಉಚಿತವಾಗಿ ವಿತರಿಸುವಂತೆ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.

ಪ್ರವಾಹ ಮತ್ತು ಮಳೆಯಿಂದಾಗಿ ರಾಜ್ಯದ ಹಲವೆಡೆ ಹಲವು ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಯು ಹಾಳಾಗಿ ಅಥವಾ ಕೊಚ್ಚಿ ಹೋಗಿರುವ ಘಟನೆಗಳು ನಡೆದಿವೆ. ಆದ್ದರಿಂದ ಪ್ರೌಢ ಶಿಕ್ಷಣ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿಗಳನ್ನು ವಿತರಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT